ಚಿಕ್ಕಮಗಳೂರು: ಸುನೀಲ್‌ಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕನ್ನಡ ಸೇನೆ ಮನವಿ

ಚಿಕ್ಕಮಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್‌ಕುಮಾರ್ ರವರನ್ನು ಸಂಪುಟದಿಂದ ತೆಗೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕೆಂದು ಕನ್ನಡ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಸಹಾಯಕರಾದ ಕೆ.ಚಂದ್ರಶೇಖರ್ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಟಿ.ಸಿ.ರಾಜೇಗೌಡ ಮನವಿ ನೀಡಿ ಮಾತನಾಡಿ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆ ಎಂಬುದಾಗಿ ಪರಿಗಣಿಸಲು ಕನ್ನಡ ಮತ್ತು ಸಂಸ್ಖೃತಿ ಇಲಾಖೆ ಕೈಗೊಂಡಿರುವ ಕ್ರಮವನ್ನು ಕೈಬಿಡಬೇಕು ಎಂದರು.

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು, ಟ್ವೀಟ್ ಮೂಲಕ ಮತ್ತು ದಿನಪತ್ರಿಕೆ, ವಾಹಿನಿಗಳಲ್ಲಿ ಪ್ರಸಾರವಾದಂತೆ ಕರ್ನಾಟಕ ಸರ್ಕಾರವು ತುಳು ಭಾಷೆಯನ್ನು ರಾಜ್ಯದ ೨ನೇ ಅಧಿಕೃತ ಭಾಷೆಯಾಗಿ ಪರಿಗಣಿಸುವ ಕುರಿತು ಸಮಿತಿಯನ್ನು ರಚಿಸಿದ್ದು, ಶೀಘ್ರ ವರದಿಯನ್ನು ನಿರೀಕ್ಷಿಸಲಾಗುತ್ತಿರುವುದು ಪ್ರಸಾರವಾಗಿರುತ್ತದೆ ಎಂದರು.

ತುಳು ಭಾಷೆ ದಕ್ಷಿಣದ ಕನ್ನಡ ಜಿಲ್ಲೆಯ ಬಹುಜನರು ಮಾತನಾಡುವ ಅಲ್ಲಿಯ ಮೂಲ ನಿವಾಸಿಗಳ ಭಾಷೆಯಾಗಿದ್ದು, ಸುಮಾರು ೧೭ ಲಕ್ಷಕ್ಕಿಂತಲೂ ಹೆಚ್ಚು ಜನರು ತುಳು ಭಾಷೆಯನ್ನು ಮಾತನಾಡುವವರಿದ್ದಾರೆ, ಆದ್ದರಿಂದ ತುಳು ಭಾಷೆಯನ್ನು ರಾಜ್ಯದ ೨ನೇ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂದು ತುಳುಭಾಷಿಗರ ಬೇಡಿಕೆಯಾಗಿರುತ್ತದೆ ಎಂದರು.

ರಾಜ್ಯಗಳು ರಚನೆಯಾಗುವ ಸಂದರ್ಭದಲ್ಲಿ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿ ಭಾಷೆಯ ಆಧಾರದ ಮೇಲೆ ರಾಜ್ಯ ರಚನೆಯಾಗಿರುತ್ತದೆ, ಇದರಲ್ಲಿ ರಾಜ್ಯದ ಗಡಿ ಭಾಗಗಳಲ್ಲಿರುವ ಜಿಲ್ಲೆಗಳು ಇತರೆ ಭಾಷೆಗಳನ್ನು ಒಳಗೊಂಡಂತೆ ಕನ್ನಡ ನಾಡು ರಚನೆಯಾಗಿರುತ್ತದೆ, ಅಖಂಡ ಕರ್ನಾಟಕದಲ್ಲಿ ಕನ್ನಡ ಭಾಷೆಯು ಸಾರ್ವಬೌಮತೆಯನ್ನು ಹೊಂದಿರುವ ಅಧಿಕೃತ ಭಾಷೆಯಾಗಿದ್ದು, ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ಮಾತನಾಡುವ ಕನ್ನಡಿಗರೇ ಸಾರ್ವಬೌಮನಾಗಿರುತ್ತಾನೆ ಎಂದರು.

ತುಳು ಭಾಷೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನರು ಮಾತನಾಡುವ ಭಾಷೆಯಾಗಿರುತ್ತದೆ ಹೊರತು ಇಡೀ ರಾಜ್ಯದ ಜನರು ಮೊದಲನೇ ಅಥವಾ ಎರಡನೇ ಪ್ರಾಮುಖ್ಯತೆಯನ್ನು ಹೊಂದಿರುವ ಭಾಷೆಯಾಗಿರುವುದಿಲ್ಲ. ತುಳು ಭಾಷೆಗೆ ಯಾವುದೇ ಸ್ವಂತ ಲಿಪಿಯಾಗಲಿ, ಸಾಹಿತ್ಯವಾಗಲಿ ಇರುವುದಿಲ್ಲ, ರಾಜ್ಯದ ಇತರೆ ಯಾವುದೇ ಜಿಲ್ಲೆಗಳಲ್ಲಿಯೂ ಸಹ ಬಹುಜನರು ಮಾತನಾಡುವ ಭಾಷೆ ಆಗಿರುವುದಿಲ್ಲ. ಕೇವಲ ಒಂದು ಭಾಷೆಯಲ್ಲಿ ಬಹುಜನರು ಮಾತನಾಡುವ ಭಾಷೆಯನ್ನು ಇಡೀ ರಾಜ್ಯದ ಅದರಲ್ಲೂ ತುಳು ಭಾಷೆಯ ಗಂಧಗಾಳಿ, ಸಂಪರ್ಕವೇ ಇಲ್ಲದ ಉಳಿದ ಜಿಲ್ಲೆಗಳಿಗೂ ಅನ್ವಯವಾಗುವಂತೆ ಅಧಿಕೃತ ಭಾಷೆಯಾಗಿ ಪರಿಗಣಿಸುವುದು ಉಚಿತವಾಗಿರುವುದಿಲ್ಲ ಎಂದರು.

ತುಳು ಭಾಷೆ ಮಾತನಾಡುವವರ ಸಂಖ್ಯೆ ೧೭ ಲಕ್ಷಕ್ಕಿಂತಲೂ ಹೆಚ್ಚಿದೆ ಎನ್ನುವ ವಿಚಾರವನ್ನು ಆಧಾರವಾಗಿಟ್ಟುಕೊಂಡು, ಅಧಿಕೃತ ಭಾಷೆಯನ್ನಾಗಿ ಪರಿಗಣಿಸಲು ಕೋರುವುದಾದರೆ, ರಾಜ್ಯದ ಅನ್ಯಭಾಷಿಗರಾದ ಉರ್ದು, ತಮಿಳು, ತೆಲುಗು, ಮರಾಠಿ ಹಾಗೂ ಮಲೆಯಾಳಂ ಮಾತನಾಡುವವರ ಸಂಖ್ಯೆ ತುಳು ಮಾತನಾಡುವವರ ಸಂಖ್ಯೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಜತೆಗೆ ಅದರದ್ದೇ ಲಿಪಿಯನ್ನು ಸಹ ಇದೆ, ಆದರೆ ತುಳು ಭಾಷೆಗೆ ಲಿಪಿಯೇ ಇಲ್ಲ ಹಾಗಾಗಿ ಸಂಖ್ಯೆಯ ಮಾನದಂಡವನ್ನೇ ಇಟ್ಟುಕೊಳ್ಳುವುದಾದರೆ ಉಳಿದ ಭಾಷಿಗರನ್ನು ಸಹ ಪರಿಗಣಿಸಬೇಕಾಗುತ್ತದೆ ಎಂದರು.

ತುಳು ಭಾಷಿಗರ ಬೇಡಿಕೆ ಅಷ್ಟಕ್ಕೆ ನಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ತುಳುನಾಡು ಎಂಬುದಾಗಿ ಬದಲಾಯಿಸುವುದರ ಜತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಊರುಗಳ ಈಗಿನ ಹೆಸರನ್ನು ತುಳು ಭಾಷೆಗೆ ಬದಲಾಯಿಸಬೇಕೆಂದು ಮುಂದೊಂದು ದಿನ ಉದ್ಬವವಾಗಬಹುದೆಂದು ಮುಂದಾಲೋಚಿಸದೇ ಭಾಷಾವಾರು ಪ್ರಾಂತ್ಯವನ್ನು ರಚಿಸಿದ ರಚನಾಕಾರರು ತುಳು ಭಾಷಿಕರು ಹೆಚ್ಚಿರುವ ಜಿಲ್ಲೆಯನ್ನು ದಕ್ಷಿಣ ಕನ್ನಡ ಎಂದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತನಾಡುವ ಅರೆಭಾಷೆ ಹವ್ಯಕ ಭಾಷೆಯನ್ನು ಪರಿಗಣಿಸದೆ ಉತ್ತರ ಕನ್ನಡ ಜಿಲ್ಲೆ ಎಂದು ಅಧಿಕೃತವಾಗಿ ನಾಮಕರಣ ಮಾಡಿರುವುದನ್ನು ಗಮನಿಸಬೇಕಾಗುತ್ತದೆ ಎಂದರು.

ರಾಜ್ಯದ ೨ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸುತ್ತಿರುವ ಸರ್ಕಾರದ ನಿಲುವನ್ನು ತಕ್ಷಣವೇ ಕೈ ಬಿಡಬೇಕು, ಕನ್ನಡವನ್ನು ಹೊರತುಪಡಿಸಿ ಇತರೆ ಯಾವುದೇ ಭಾಷೆಯನ್ನು ಸ್ಥಾನಮಾನದ ಅಧಿಕೃತ ಭಾಷೆ ಎಂದು ಪರಿಗಣಿಸುವುದು, ಕನ್ನಡದ ಸಾರ್ವಬೌಮತಕ್ಕೆ ದಕ್ಕೆ ಉಂಟುಮಾಡಿದಂತಾಗುತ್ತದೆ, ದಕ್ಕೆಯನ್ನುಂಟುಮಾಡುವಂತಹ ಕ್ರಮವೆಂದು ಪರಿಗಣಿಸುವುದು, ಹಾಗೆ ಮಾಡದಿದ್ದಲ್ಲಿ ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಸೇನೆ ನಗರ ಆಟೋ ಸಂಘದ ಅಧ್ಯಕ್ಷ ಜಯಪ್ರಕಾಶ್, ಉಪಾಧ್ಯಕ್ಷ ಶಂಕರೇಗೌಡ, ಹರೀಶ್, ಮೂಡಿಗೆರೆ ಪ್ರಸನ್ನ, ಹರೀಶ್, ಮೂರ್ತಿ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

3 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

18 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

41 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

58 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

1 hour ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago