ಚಿಕ್ಕಮಗಳೂರು: ಕಾಫಿ ನಾಡಿಗೆ ದಕ್ಕೀತೆ ಮಂತ್ರಿ ಭಾಗ್ಯ, ಹೈಕಮಾಂಡ್‌ನತ್ತ ಕೈ ಶಾಸಕರ ಚಿತ್ತ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರೆಕೋಟೆಯಾಗಿತ್ತು. ಸ್ಥಳೀಯ ಸಂಸ್ಥೆಯಿಂದ ಹಿಡಿದು ವಿಧಾನಸಭೆ, ಲೋಕಸಭೆವರೆಗೂ ಬಿಜೆಪಿ ಜನಪ್ರತಿನಿಧಿಗಳು ಆಯ್ಕೆ ಯಾಗಿದ್ದರು.

ಈ ಮೂಲಕ ಕಾಂಗ್ರೆಸ್ ಶೂನ್ಯ ಸಾಧನೆ ಮೂಲಕ ಜಿಲ್ಲೆಯಲ್ಲಿ ಹೇಳ ಹೆಸರಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾಂಗ್ರೆಸ್ ಗೆ ಸಂಜೀವಿನಿಯಂತೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜಿಲ್ಲೆಯಿಂದ ಐದಕ್ಕೆ ಐದು ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಪಕ್ಷಕ್ಕೆ ಮರುಜೀವ ತಂದುಕೊಟ್ಟಿದ್ದಾರೆ.

ಈ ಮೂಲಕ ಶಾಸಕರು, ಜಿಲ್ಲೆಯ ಜನತೆ ಮಂತ್ರಿಗಿರಿಯ ನಿರೀಕ್ಷೆಯಲ್ಲಿ ದ್ದಾರೆ. ಚಿಕ್ಕಮಗಳೂರು ಜಿಲ್ಲೆ ರಾಜಕೀಯಕ್ಕೆ ಹಲವು ನಾಯಕರನ್ನು ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಂದು ಕಾಲದಲ್ಲಿ ಜಿಲ್ಲೆಯಿಂದ ಆಯ್ಕೆಯಾದ ಎರಡರಿಂದ ಮೂವರು ಮಂತ್ರಿಗಳಾಗಿದ್ರು. ಇದೀಗ ಮತ್ತೆ ಅದೇ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಜಿಲ್ಲೆಯಿಂದ ೫ ವಿಧಾನಸಭಾ ಕ್ಷೇತ್ರದಿಂದ ಕೈ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಇದು ಸಹಜವಾಗಿ ಜಿಲ್ಲೆಗೆ ಮಂತ್ರಿಗಿರಿ ಭಾಗ್ಯ ದೊರೆಯುಲಿದೆ ಎನ್ನುವ ಚರ್ಚೆ ಆರಂಭವಾಗಿದೆ.

ನಕ್ಸಲ್‌ಪೀಡಿತ ಜಿಲ್ಲೆಗೆ ಮೂಲಸೌಕರ್ಯಗಳ ಸಮಸ್ಯೆ: ತರೀಕೆರೆ, ಶೃಂಗೇರಿಯಿಂದ ಜೆ.ಹೆಚ್. ಶ್ರೀನಿವಾಸ್, ಟಿ.ಡಿ.ರಾಜೇಗೌಡ ಸತತವಾಗಿ ಎರಡನೇ ಭಾರೀಗೆ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಇನ್ನು ಉಳಿದ ಮೂರು ಕ್ಷೇತ್ರದಿಂದ ಹೊಸದಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಹೀಗಾಗಿ ಜಿ.ಹೆಚ್. ಶ್ರೀನಿವಾಸ್ ಅಥವಾ ಟಿ.ಡಿ.ರಾಜೇಗೌಡರಿಗೆ ಮಂತ್ರಿಗಿರಿ ಸಿಗಲಿದೆ ಎನ್ನುವ ರಾಜಕೀಯ ಚರ್ಚೆ ಆರಂಭವಾಗಿದೆ. ಚಿಕ್ಕಮಗಳೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಒಳಗೊಂಡಿರುವ ಜಿಲ್ಲೆಯಾಗಿದೆ. ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಭಾಗಗಳು ನಕ್ಸಲ್ ಪೀಡಿತ ಪ್ರದೇಶವಾಗಿದ್ದು, ಹಲವು ಸಮಸ್ಯೆಗಳಿಂದ ಜಿಲ್ಲೆಯ ಜನತೆ ತತ್ತರಿಸಿ ಹೋಗಿದ್ದಾರೆ.

ಹೊಂದಾಣಿಕೆ ಕೊರತೆಯಿಂದ ಮಂತ್ರಿಗಿರಿ ವಂಚನೆ: ಕಳೆದ ಭಾರೀ ಬಿಜೆಪಿ ಸರ್ಕಾರದಲ್ಲಿ ಇಬ್ಬರ ಹೆಸರು ಪ್ರಬಲವಾಗಿ ಕೇಳಿಬಂದರೂ ಹೊಂದಾ ಣಿಕೆಯ ಕೊರತೆಯಿಂದ ಮಂತ್ರಿಗಿರಿಯ ಸ್ಥಾನ ಕೈತಪ್ಪಿ ಹೋಗುತಿತ್ತು. ಆದ್ರೆ ಈ ಭಾರಿ ನೂತನವಾಗಿ ಆಯ್ಕೆ ಆಗಿರುವ ಐವರು ಶಾಸಕರು ಒಗ್ಗೂಡಿ ಮುಂತ್ರಿ ಸ್ಥಾನಕ್ಕೆ ಒತ್ತಾಯಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಮಂತ್ರಿ ಸ್ಥಾನದಿಂದ ದೊರಉಳಿದಿದೆ. ಉಸ್ತುವಾರಿ ಸಚಿವರು ಕೂಡ ಪರಜಿಲ್ಲೆಗಳಿಂದ ಬಂದ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರಲ್ಲೂ ಮೈತ್ರಿ ಸರ್ಕಾರ, ಬಿಜೆಪಿ ನೇತೃತ್ವದಲ್ಲಿ ಬಂದ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ಶಾಸಕರು ವಂಚಿತರಾಗಿದ್ದರು. ಆದ್ರೆ ಈ ಭಾರೀ ಚಿಕ್ಕಮಗಳೂರು ಜಿಲ್ಲೆಯು ಐವರು ಕಾಂಗ್ರೆಸ್ ಶಾಸಕರನ್ನು ಹೊಂದಿರುವ ಕಾರಣಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿದ್ಯ ದೊರೆಯುವುದೇ ಎನ್ನುವುದನ್ನು ಕಾದುನೋಡಬೇಕಾಗಿದೆ.

Ashika S

Recent Posts

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

15 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

34 mins ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

45 mins ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

1 hour ago

13 ವರ್ಷದ ಬಾಲಕಿ ಜೊತೆ 70ರ ವೃದ್ಧ ಮದುವೆ: ತಂದೆ, ವರ ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯನ್ನು  70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

2 hours ago

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌…

2 hours ago