ಚಿಕ್ಕಮಗಳೂರು: ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹೆಚ್.ಡಿ.ತಮ್ಮಯ್ಯ ಭೇಟಿ

ಚಿಕ್ಕಮಗಳೂರು: ನಗರ ಸೇರಿದಂತೆ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹೆಚ್.ಡಿ.ತಮ್ಮಯ್ಯ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು.

ಸಖರಾಯಪಟ್ಟಣದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿತ್ತು. ಆಲಿಕಲ್ಲು ಮಳೆಗೆ ಮನೆಯ ಮೇಲ್ಛಾ ವಣಿಯ ಶೀಟ್‌ಗಳು ಹಾರಿ ಹೋಗಿ ದ್ದವು.
ಆಗಲೇರಿ ಗ್ರಾಮದ ಮಂಗಳಮ್ಮ, ರತ್ನಮ್ಮ, ರಂಗಣ್ಣ ಎಂಬುವರ ಮನೆಗೆ ಹಾನಿಯಾಗಿತ್ತು. ಮಳೆಯಿಂದ ಹಾನಿಯಾದ ಕುಟುಂಬಕ್ಕೆ ಗ್ರಾಮ ಸ್ಥರು ಸಹಾಯ ಮಾಡಿದರು.

ಮನೆಯಲ್ಲಿದ್ದ ಆಹಾರ ಸಾಮಗ್ರಿ ಹಾಗೂ ಪೀಠೋಪಕರಣಗಳಿಗೂ ಹಾನಿಯಾಗಿತ್ತು. ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಹಾಗೂ ರೆವೆನ್ಯೂ ಇನ್ಸ್ಪೆಕ್ಟರ್‌ಗೆ ಸೂಚನೆ ನೀಡಿ ಮನೆಗಳಿಗೆ ತುರ್ತಾಗಿ ಟಾರ್ಪಲ್ ವ್ಯವಸ್ಥೆ ಮಾಡಲು ಪಿಡಿಓಗೆ ಆದೇಶಿಸಿದರು.

ಈ ನಡುವೆ ಇಂದು ಚಿಕ್ಕಮ ಗಳೂರು ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು ನಗರ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದ್ದು ಅರ್ಧ ಗಂಟೆಯಿಂದ ಸುರಿದ ಭಾರೀ ಮಳೆ ಯಿಂದರಸ್ತೆಯಲ್ಲಿ ನದಿಯಂತೆ ನೀರು ಹರಿಯುತ್ತಿತ್ತು. ಮನೆಗಳಿಗೆ ವಾಪಸ್ ಹೋಗಲಾಗದೆ ಜನ ಪರದಾಡಿದರು.

Ashika S

Recent Posts

2ನೇ ಹಂತದ ಮತದಾನ: ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿರ್ಬಂಧ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. 

12 mins ago

ಲೆಮುರ್‌ ಬೀಚ್‌ನಲ್ಲಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ನೀರುಪಾಲು

ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಲೆಮುರ್‌ ಬೀಚ್‌ನಲ್ಲಿ ನಡೆದಿದೆ.

13 mins ago

ಜೆಟ್ ಏರ್ವೇಸ್​ನ ನರೇಶ್ ಗೋಯಲ್​ಗೆ ಕೊನೆಗೂ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆ ಆರೋಪವಿರುವ ಪ್ರಕರಣ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಕೊನೆಗೂ ಜಾಮೀನು ಮಂಜೂರುರಾಗಿದೆ.

20 mins ago

ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟ: ಓರ್ವ ಅಪ್ರಾಪ್ತ ಸಾವು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಓರ್ವ ಅಪ್ರಾಪ್ತ ಮೃತಪಟ್ಟಿದ್ದು, ಇಬ್ಬರು ಅಪ್ರಾಪ್ತರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

31 mins ago

ವಾಯುಸೇನೆ ಮೇಲೆ ದಾಳಿ : ಇಬ್ಬರು ಉಗ್ರರ ಸ್ಕೆಚ್ ಬಿಡುಗಡೆ, 20 ಲಕ್ಷ ರೂ. ಬಹುಮಾನ ಘೋಷಣೆ

ಭಾರತೀಯ ವಾಯುಸೇನೆಯ ವಾಹನದ ಮೇಲೆ ಕಳೆದ ವಾರ ಕಾಶ್ಮೀರದ ಪೂಂಚ್ ಸೆಕ್ಟರ್​ನಲ್ಲಿ ದಾಳಿ ಮಾಡಿ ಒಬ್ಬ ಯೋಧರನ್ನು ಬಲಿತೆಗೆದುಕೊಂಡಿದ್ದ ಉಗ್ರಗಾಮಿಗಳನ್ನು…

38 mins ago

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್ ತಡೆಯಾಜ್ಞೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ…

45 mins ago