News Karnataka Kannada
Saturday, April 27 2024
ಚಿಕಮಗಳೂರು

ಚಿಕ್ಕಮಗಳೂರು: ನಮಾಜ್ ವೇಳೆ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ವಿರೋಧ, 2 ಗುಂಪುಗಳ ನಡುವೆ ಜಟಾಪಟಿ

Muslims oppose Congress campaign during Namaz, clash breaks out between two groups
Photo Credit : News Kannada

ಚಿಕ್ಕಮಗಳೂರು: ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ವಿರುದ್ಧ ಮುಸ್ಲಿಮರು ರೆಬೆಲ್ ಆಗಿದ್ದಾರೆ. ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರು ಕಿಡಿಕಾರಿದ್ದು, ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆದಿದೆ.

ಎರಡು ಗುಂಪುಗಳ ನಡುವಿನ ಜಟಾಪಟಿ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಡಿ. ತಮ್ಮಯ್ಯ ಮೂಕ ಪ್ರೇಕ್ಷಕನಾಗಿ ನಿಂತಿದ್ದರು. ಚಿಕ್ಕಮಗಳೂರು ನಗರದ ಕೆಇಬಿ ಸರ್ಕಲ್ ನಲ್ಲಿ ಈದ್ಗಾ ಮೈದಾನವಿದ್ದು, ರಂಜಾನ್ ಹಬ್ಬದ ಹಿನ್ನೆಲೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವ ವೇಳೆ ಈ ಘಟನೆ ನಡೆದಿದೆ.

ಎರಡು ಗುಂಪುಗಳ ನಡುವೆ ಗಲಾಟೆ ತಾರಕಕೇರುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ. ತಮ್ಮಯ್ಯ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಮುಸ್ಲಿಮರ ಸಮಾಧಾನಕ್ಕೆ ಮುಂದಾದರು. ಅಲ್ಪಸಂಖ್ಯಾತರ ಅಸಮಾಧಾನದಿಂದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಮುಜುಗರಕ್ಕೀಡಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು