ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ಪಟಾಕಿ ಸಿಡಿದು ಪ್ರದೀಪ್(30) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಜೊತೆಗೆ ಮೂವರು ಮಕ್ಕಳಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ನೇ ತರಗತಿಯ ವಿದ್ಯಾರ್ಥಿ ಕುಶಾಲ್ ಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತಪಟ್ಟ ಪ್ರದೀಪ್, ಅಡಕೆ ಗೋಟು (ಕಲ್ಲು ಆಟಂಬಾಂಬ್) ಪಟಾಕಿಯನ್ನ ಚೇರ್ ಕೆಳಗೆ ಇಟ್ಟುಕೊಂಡು ಕೂತಿದ್ದ ವೇಳೆ ಪಟಾಕಿ ಸಿಡಿದಿದ್ದು ಪಟಾಕಿ ಸಿಡಿದ ರಭಸಕ್ಕೆ ನೆಲದಿಂದ 5 ಅಡಿ ಹಾರಿ ಬಿದ್ದಿದ್ದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರವಾಗಿ ಏಟು ಬಿದ್ದು ಸಾವು ಸಂಭವಿಸಿದೆ. ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೂ ಗಂಭೀರವಾಗಿ ಗಾಯವಾಗಿದೆ. ಮೂವರು ಮಕ್ಕಳಿಗೂ ಗಾಯಗಳಾಗಿವೆ. ಕಲ್ಲು ಆಟಂಮ್ ಬಾಂಬ್ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ಗಳು ಪುಡಿ-ಪುಡಿಯಾಗಿವೆ.
ಈ ಘಟನೆ ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.