News Karnataka Kannada
Thursday, May 09 2024
ಚಿಕಮಗಳೂರು

ಚಿಕ್ಕಮಗಳೂರು: ಉತ್ತಮ ವಿಚಾರಗಳನ್ನು ಅಳವಡಿಸಿಕೊಳ್ಳುವುದೇ ವ್ಯಕ್ತಿತ್ವ ವಿಕಸನ- ಮೇಟಿ

Chikkamagaluru: Personality development is the adoption of good ideas: Meti
Photo Credit : News Kannada

ಚಿಕ್ಕಮಗಳೂರು: ಪ್ರತಿಯೊಬ್ಬರ ಬದುಕಿನ ಉತ್ತಮ ವಿಚಾರ, ಆದರ್ಶ ಹಾಗೂ ಪ್ರೇರಣೆಯನ್ನು ಕಾರಾಗೃಹ ಬಂಧಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳುವುದೇ ವ್ಯಕ್ತಿತ್ವ ವಿಕಸನ ಮೂಲ ಧ್ಯೇಯ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲ ಎಸ್.ಮೇಟಿ ಹೇಳಿದರು.

ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ವತಿಯಿಂದ ನಗರದ ಕಾರಾಗೃಹದಲ್ಲಿ ಕಾರಾಗೃಹವಾಸಿಗಳಿಗೆ ಏರ್ಪಡಿಸಲಾಗಿದ್ದ ಬಂಧಿಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮನರಂಜನೆ ಎಂಬುದು ವ್ಯಕ್ತಿತ್ವ ವಿಕಸನ ಒಂದು ಭಾಗವಾಗಿದೆ. ಆ ನಿಟ್ಟಿನಲ್ಲಿ ಕಾರಾಗೃಹವಾಸಿಗಳು ತಮ್ಮತನವನ್ನು ಬೆಳೆಸಿಕೊಳ್ಳುತ್ತಾ ವಿಕಸನ ದಲ್ಲಿ ಭಾಗವಹಿಸಬೇಕು. ಬದುಕಿನಲ್ಲಿ ಉತ್ತಮ ಚಿಂತನೆ, ತಾಳ್ಮೆ ಹಾಗೂ ಶಾಂತಿಯಿಂದ ವ್ಯಕ್ತಿತ್ವ ವಿಕಸನ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. ದೇಶ ಹಾಗೂ ನಾಡಿನಲ್ಲಿ ಅನೇಕ ಮಂದಿ ಮಹಾನೀಯರು ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ. ಅಂತಹವರ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸತ್ಪಜೆಯಾಗಿ ಜೀವಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಮನಃಶಾಸ್ತ್ರದ ಚಿಂತಕ ಫಾದರ್ ವಿನಯ್ ಮಾತನಾಡಿ ಆಕಸ್ಮಿಕ ನಡೆಯುವ ತಪ್ಪುಗಳಿಂದ ಕೆಲವು ಮಂದಿ ಕಾರಾವಾಸಿಗಳಾಗುತ್ತಾರೆ. ಇರುವಷ್ಟು ದಿನಗಳಲ್ಲಿ ಇತರರಿಂದ ಉತ್ತಮ ವ್ಯಕ್ತಿತ್ವವನ್ನು ಪಡೆದುಕೊಳ್ಳ ಬೇಕು. ಬಿಡುಗಡೆ ನಂತರ ಸಾತ್ವಿಕ ಜೀವನ ನಡೆಸಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಾಮಾಜಿಕ ಸೇವಾ ನಿರ್ದೇಶಕ ಪ್ರದೀಪ್, ಯುವ ನಿರ್ದೇಶಕ ಸಚ್ಚಿನ್, ಜೈಲರ್ ಎಂ.ಕೆ.ನೆಲಧರಿ, ಕಾರಾಗೃಹ ಸಿಬ್ಬಂದಿಗಳು ಹಾಗೂ ಕಾರಾಗೃಹಬಂಧಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು