News Karnataka Kannada
Monday, April 29 2024
ಚಿಕಮಗಳೂರು

ಚಿಕ್ಕಮಗಳೂರು: ತಾಲೂಕು ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ನಿರಾಶ್ರಿತರು

Refugees attempt suicide at taluk office
Photo Credit : News Kannada

ಚಿಕ್ಕಮಗಳೂರು: ಪರಿಹಾರಕ್ಕಾಗಿ ನಾಲ್ಕು ವರ್ಷದಿಂದ ಕಾದು ಕಾದು ಸುಸ್ತಾದ ನಿರಾಶ್ರಿತರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಅಧಿಕಾರಿಗಳ ಮುಂದೆ ಆತ್ಮಹತ್ಯೆಗೆ ಯತ್ನಿಸಿದವರು ಮೂಡಿಗೆರೆ ತಾಲೂಕಿನ ಮಧುಗುಂಡಿ-ಮಲೆಮನೆ ಗ್ರಾಮಸ್ಥರಾಗಿದ್ದಾರೆ.

೨೦೧೯ರ ಆಗಸ್ಟ್ ೯ರಂದು ಧಾರಾಕಾರ ಮಳೆಯಾಗಿದ್ದು, ಮಲೆಮನೆ-ಮಧುಗುಂಡಿ ಗ್ರಾಮಗಳು ಅಸ್ತವ್ಯಸ್ತಗೊಂಡಿದ್ದವು.ಈ ಗ್ರಾಮದಲ್ಲಿ ಮನೆಗಳು ಇರುವ ಕುರುಗಳು ಇರರದಂತಹ ಸ್ಥಿತಿ ನಿರ್ಮಾಣವಾಗಿತ್ತು. ಗುಡ್ಡದ ಮಣ್ಣು ಕುಸಿದು ಬಿದ್ದು ಊರಿಗೆ ಊರೇ ನೆಲಸಮವಾಗಿತ್ತು. ಈ ವೇಳೆ ಜನರು ರಾತ್ರೋರಾತ್ರಿ ಮನೆಯಿಂದ ಓಡಿಬಂದು ಜೀವ ಉಳಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಆರ್.ಅಶೋಕ್, ಸಿ.ಟಿ.ರವಿ, ಶೋಭಾ ಕರಂದ್ಲಾಜೆ, ಮಾಧುಸ್ವಾಮಿ ಸೇರಿದಂತೆ ಹಲವಾರು ನಾಯಕರು ಘಟನಾ ಸ್ಥಳಕ್ಕೆ ಆಗಮಿಸಿ ಹೊಸ ಬದುಕಿನ ಭರವಸೆ ನೀಡಿದ್ದರು. ಆದರೆ ಆ ಭರವಸೆಗಳು ಇಂದಿಗೂ ಭರವಸೆಯಾಗೇ ಉಳಿದಿವೆ. ಇಲ್ಲಿನ ಜನ ಹೋರಾಟ, ಮನವಿ ಏನೇ ಮಾಡಿದರು. ಸರ್ಕಾರದಿಂದ ಅಲ್ಪ ಪ್ರಮಾಣದ ಪರಿಹಾರ ಸಿಕ್ಕಿದೆ. ನಾಲ್ಕು ವರ್ಷದಿಂದ ಕಾದು-ಕಾದು ಸುಸ್ತಾದ ಜನರು ಶುಕ್ರವಾರ ತಾಲೂಕು ಕಚೇರಿ ಯಲ್ಲಿ ವಿಷ ಸೇವಿಸಿ, ಮೈಮೇಲೆ ಸೀಮೆಎಣ್ಣೆ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇಲ್ಲವಾದರೆ, ಮೂಡಿಗೆರೆ ತಾಲೂಕು ಕಚೇರಿ ಹಾಗೂ ಸರ್ಕಾರ ಮತ್ತೊಂದು ಅನಾಹುತ ಸಂಭವಿಸುತ್ತಿತ್ತು.

ಆತ್ಮಹತ್ಯೆಗೆ ಯತ್ನಿಸಿದ ನಿರಾಶ್ರಿತರು ಸರ್ಕಾರ, ತಾಲೂಕು ಆಡಳಿತ ಹಾಗೂ ಜನನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನೆರೆಪರಿಹಾರ ಅಂತ ಮೂಡಿಗೆರೆಗೆ ನೂರಾರು ಕೋಟಿ ಹಣ ಬಂದರೂ ಅದು ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ್ದಾರೆ. ಮೂಡಿಗೆರೆ ಶಾಸಕ ಕುಮಾರಸ್ವಾಮಿ ಕೋಟ್ಯಾಂತರ ರೂಪಾಯಿ ಮನೆ ಕಟ್ಟುತ್ತಿದ್ದಾರೆ. ನಮಗೆ ಇರೋದಕ್ಕೆ ಒಂದು ಸೂರು ಬೇಡ್ವಾ. ಸರ್ಕಾರ ಹಾಗೂ ಶಾಸಕರಿಗೆ ನಮ್ಮ ನೋವು ಅರ್ಥವಾಗಿಲ್ವಾ ಎಂದು ವ್ಯವಸ್ಥೆ ವಿರುದ್ಧ ಕಿಡಿಕಾರಿದ್ದಾರೆ.

ಭೈರಾಪುರ ಗ್ರಾಮಕ್ಕೆ ಹೋಗಿ ಎನ್ನುತ್ತಿದ್ದಾರೆ. ಭೈರಾಪುರ ವಾರ್ಷಿಕ ೩೦೦ ಇಂಚು ಮಳೆ ಬೀಳುವ ಪ್ರದೇಶ. ದಟ್ಟಕಾನನ. ಕಾಡುಪ್ರಾಣಿಗಳ ಹಾವಳಿಗೆ ಮಿತಿಯೇ ಇಲ್ಲ. ಅಲ್ಲಿನ ಜನರೇ ಅಲ್ಲಿ ಏನೂ ಮಾಡಲಾಗದೆ ಕೈಕಟ್ಟಿ ಕೂತಿದ್ದಾರೆ. ಆ ಕಾಡಿಗೆ ಹೋಗಿ ನಾವು ಹೋಗಿ ಏನು ಮಾಡುವುದು. ನಮ್ಮ ಜಾಗವನ್ನ ಸರ್ಕಾರಕ್ಕೆ ಬರೆದುಕೊಟ್ಟಿದ್ದೇವೆ. ಸರ್ಕಾರ ನಮಗೆ ಸೂಕ್ತ ಬದಲಿ ಜಾಗವನ್ನಾದರೂ ನೀಡಿದರೆ ಸಾಕು.

ನಮ್ಮ ಬದುಕನ್ನ ನಾವು ನೋಡಿಕೊಳ್ತೇವೆ. ಆದರೆ ಸರ್ಕಾರ ಪ್ರತಿಸಾರಿ ಬಂದಾಗಲೂ ನಮ್ಮ ಮೂಗಿಗೆ ತುಪ್ಪಾ ಸವರಿ, ಶಾಸಕರು ಬಣ್ಣದ ಮಾತುಗಳನ್ನಾಡಿ ಕಳಿಸುತ್ತಾರೆ. ನಮಗೆ ಬದುಕು ಬೇಕು ಇಲ್ಲ, ವಿಷ ಬೇಕು ಎಂದು ತಾಲೂಕು ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

೨೦೧೯ರ ಮಲೆನಾಡ ರಣಮಳೆ ಸಾವಿರಾರು ಜನರ ಬದುಕಿನ ಮೇಲೆ ಬರೆ ಎಳೆದಿದೆ. ಶತಮಾನದ ಬದುಕು ಕಣ್ಣೆದುರೇ ಕೊಚ್ಚಿ ಹೋಗುವಾಗ ಜನ ಮೂಕಪ್ರೇಕ್ಷಕರಾಗಿ ನಿಂತಿದ್ದರು. ಸರ್ಕಾರ ಅವರ ನೆರವಿಗೆ ಬರಲಿಲ್ಲ. ಅವರಿಗೆ ಮತ್ತೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗ್ತಿಲ್ಲ. ಇವರ ಪಾಲಿಗೆ ಸರ್ಕಾರ ಇದ್ದು ಇಲ್ಲದಂತಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನ ಒಂದೇ ಜೀವಿತಾವದಿ ಯಲ್ಲಿ ಎರಡನೇ ಬಾರಿಗೆ ಹೊಸ ಬದುಕು ಕಟ್ಟಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಸರ್ಕಾರ ಕಳೆದುಕೊಂಡಿ ದ್ದೆಲ್ಲವನ್ನೂ ನೀಡೋದಕ್ಕೆ ಸಾಧ್ಯವಿಲ್ಲ. ಆದರೆ, ಮೂಲಭೂತ ಸೌಲಭ್ಯವನ್ನಾದರೂ ನೀಡಬೇಕಿತ್ತು. ಆದರೆ ಸರ್ಕಾರ ಆ ಯೋಜನೆಗೆ ಹೋಗಿಲ್ಲ ಎನ್ನುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು