News Karnataka Kannada
Sunday, April 28 2024
ಚಿಕಮಗಳೂರು

ಚಿಕ್ಕಮಗಳೂರು: ಜಿಲ್ಲೆಯ ಅರಣ್ಯ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ

Sincere efforts to solve the forest problems of the district
Photo Credit : News Kannada

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಅರಣ್ಯ ಸಮಸ್ಯೆಗಳನ್ನು ಬಗೆಹರಿಸಿ ರೈತರು, ಕಾಫಿ ಬೆಳೆಗಾರರು ಸೇರಿದಂತೆ ಇತರರಿಗೆ ಅನುಕೂಲ ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವ ಹಿಸುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿ ಗಳೊಂದಿಗೆ ಜಿಲ್ಲೆ ಯ ಅರಣ್ಯ ಭೂಮಿ ಸಮಸ್ಯೆ ಕುರಿತು ಚರ್ಚಿಸಿದರು.

ನಾನು ಶಾಸಕ ಎಂಬ ಯಾವ ಕೊಂಬು ನನಗೂ ಇಲ್ಲ. ರೈತರ ಸಮಸ್ಯೆಗಳು ಬಗೆಹರಿಯಬೇಕು ಅಷ್ಟೇ ಎಂದ ಅವರು, ನಾನು ಜಿಲ್ಲಾಧಿಕಾರಿ ಕಚೇರಿ ಮತ್ತು ಎಸ್‌ಪಿ ಕಚೇರಿಗೆ ಬರುತ್ತೇನೆ. ವಿವಿಧ ಸಂಘಟನೆಗಳ ನಾಲ್ಕರಿಂದ ಐದು ಜನರು ಜಿಲ್ಲಾಧಿಕಾರಿ ಮತ್ತು ಡಿಎಫ್‌ಓ ಅರಣ್ಯ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋಣ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳೋಣ ಎಂದು ಭರವಸೆ ನೀಡಿದರು.

ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಮಾತನಾಡಿ, ಹಿಂದಿನ ಶಾಸಕರಿಗೆ ಜನಪರ ಕಾಳಜಿ ಇರಲಿಲ್ಲ. ಜನರ ಸಮಸ್ಯೆಗಳು ಅರ್ಥವಾಗುತ್ತಿರಲಿಲ್ಲ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಿಲ್ಲ ಎಂದು ದೂರಿದರು.

ಶಾಸಕ ಎಚ್.ಡಿ.ತಮ್ಮಯ್ಯ ಅವರಿಗೆ ಜನಪರ ಕಾಳಜಿ ಇದೆ ಎಂದ ಅವರು, ಸರ್ಕಾರ ಕಾನೂನು ನಿಯಮಗಳನ್ನು ಪಾಲನೆ ಮಾಡುವುದರೊಂದಿಗೆ ರೈತರ ಮತ್ತು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿ ಸುವ ಪ್ರಯತ್ನ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು, ಅರಣ್ಯ ಸಮಸ್ಯೆಗಳ ಕುರಿತು ಅರಣ್ಯ ಸಚಿವರ ಬಳಿ ಜಿಲ್ಲೆಯಿಂದ ಸಮಿತಿ ಕರೆದೊಯ್ದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ ಎಂದರು.

ಕಂದಾಯ ಮತ್ತು ಅರಣ್ಯಭೂಮಿ ಸಮಸ್ಯೆ ಸಂಬಂಧ ಜಂಟಿ ಸರ್ವೇ ಕಾರ್ಯ ನಡೆಯಬೇಕಿದ್ದು, ಈ ಕುರಿತು ಶಾಸಕರು ಸಚಿವರ ಗಮನಕ್ಕೆ ತಂದು ಪರಿಹರಿಸಲಿದ್ದಾರೆ . ಕಸ್ತೂರಿ ರಂಗನ್ ವರದಿ ಸಂಬಂಧ ಸಮಿತಿ ರಚಿಸಿದ್ದು ಸಮಿತಿ ಸದಸ್ಯರು ಜಿಲ್ಲೆಗೆ ಬಂದು ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಶಾಸಕ ಎಚ್.ಡಿ. ತಮ್ಮಯ್ಯ ಅವರು ಶ್ರಮಿಸಲಿದ್ದಾರೆಂದು ತಿಳಿಸಿದರು.

ಸಮಿತಿ ಸಂಚಾಲಕ ಎಸ್.ವಿಜಯ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿರುವ ಅರಣ್ಯ ಸಮಸ್ಯೆಗಳನ್ನು ಶಾಸಕರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಸಭೆ ಕೆರೆಯಲಾಗಿದೆ , ಜಿಲ್ಲೆಯಲ್ಲಿ ಡೀಮ್ಡ್ ಫಾರೆಸ್ಟ್, ಸೆಕ್ಷನ್ ೪(೧) ಸಮಸ್ಯೆ, ಕಸ್ತೂರಿ ರಂಗನ್ ವರದಿ ಸಮಸ್ಯೆ, ರಾಜ್ಯ ಮೀಸಲು ಅರಣ್ಯ, ಅರಣ್ಯ ಕಾಯ್ದೆಗಳಿಂದ ಜನರಿಗೆ ಹಕ್ಕುಪತ್ರ ಸಿಗುತ್ತಿಲ್ಲ. ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ ಈ ನಿಟ್ಟಿನಲ್ಲಿ ಅರಣ್ಯ ಸಮಸ್ಯೆಗಳನ್ನು ಪರಿಹರಿಸಲು ಶಾಸಕ ಎಚ್.ಡಿ.ತಮ್ಮಯ್ಯ ಅವರು ಮುಂದಾಗ ಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಸಮಿತಿ ಸಂಚಾಲಕ ರಘು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಪಿ.ಮಂಜೇಗೌಡ, ನಗರಸಭೆ ಸದಸ್ಯ ಎ.ಸಿ.ಕುಮಾರ್ ಗೌಡ, ರವಿ, ಶಾಂತಕು ಮಾರ್ ಪೀಟರ್, ವೀರಶೆಟ್ಟರು, ಕುಮಾರ್, ಜಯರಾಮ್, ಉಮೇಶ್ ಸೇರಿದಂತೆ ಅನೇಕರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು