ಚಿಕಮಗಳೂರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ 100 ವರ್ಷ ಮೇಲ್ಪಟ್ಟ 90 ಮಂದಿಯ ಮತದಾನಕ್ಕೆ ವಿಶೇಷ ವ್ಯವಸ್ಥೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ 100 ವರ್ಷಕ್ಕಿಂತ ಹೆಚ್ಚಿನ ವಯೋ ಮಾನದ 90 ವ್ಯಕ್ತಿಗಳಿದ್ದು, ಅವರಿಗೆ ವಿಶೇಷವಾಗಿ ಅವರನ್ನು ಗೌರವಿಸಿ ಮತಗಟ್ಟೆಗೆ ಕರೆತಂದು ಮತದಾನದ ನಂತರ ಮತ್ತೆ ಮನೆಗೆ ಬಿಟ್ಟುಬರುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಿ.ಪ್ರಭು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಗ್ರಾ.ಪಂ. ತಾಲ್ಲೂಕು ಹಾಗೂ ಜಿಲ್ಲಾ ಆಡಳಿತದ ಎಲ್ಲಾ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ವಿಕಲ ಚೇತನರು ಹಾಗೂ ೮೦ ವರ್ಷ ಮೇಲ್ಪಟ್ಟವರನ್ನು ಕರೆತರಲು ವಾಹನ ವ್ಯವಸ್ಥೆ, ಮನೆ ಮನೆಗೆ ತೆರಳಿ ಮತ ಹಾಕಿಸಲು ೨೫೦ ಮಂದಿ ಸಿಬ್ಬಂದಿಗಳನ್ನು ನೇಮಿಸಲಾಗುವುದು. ಗ್ರಾ.ಪಂ. ಸಹಯೋಗದಲ್ಲಿ ಅವರನ್ನು ಮತಗಟ್ಟೆಗೆ ಕರೆತರಲಾಗುವುದು.

ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಜಿಲ್ಲೆ ೧೨೦ ಮತಗಟ್ಟೆಗಳನ್ನು ವಿವಿಧ ರೀತಿಯಲ್ಲಿ ಅಲಂಕರಿಸಲಾಗಿದೆ. ಆವರಣಗಳನ್ನು ಸ್ವಚ್ಛಮಾಡಿ, ಅಂದಗೊಳಿಸಲಾಗಿದೆ ಎಂದು ತಿಳಿಸಿದರು.

ಈ ಎಲ್ಲಾ ೧೨೦ ಮತಗಟ್ಟೆಗಳ ಭಾವಚಿತ್ರವನ್ನು ಏಪ್ರಿಲ್ ೩೦ ರಂದು ಬಿಡುಗಡೆಗೊಳಿಸಲಾಗುವುದು. ಮತದಾರರ ಜಾಗೃತಿ ಅರಿವು ಭಾಗವಾಗಿ ಎಲ್ಲೆಡೆ ಜಾಥಾಗಳು, ಕ್ಯಾಂಡಲ್ ಮಾರ್ಚ್, ಪಂಜಿನ ಮೆರವಣಿಗೆ, ಮಾನವ ಸರಪಳಿ, ರಂಗೋಲಿ ಸ್ಪರ್ಧೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ ೩೦ ರಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರತಿ ಮನೆಗೆ ಕರಪತ್ರಗಳನ್ನು ಹಂಚಲಾಗುವುದು ಎಂದರು.

ವಿಶೇಷ ಮತದಾರರಿಗೆ ವಿಶೇಷ ವ್ಯವಸ್ಥೇ ಮೂಲಕ ಮತದಾನಕ್ಕೆ ಕರೆತರಲಾಗುವುದು ಇದಕ್ಕಾಗಿ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ರಾಜ್ಯದಲ್ಲೇ ಪ್ರಥಮ ಜಿಲ್ಲೆಯಾಗಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

೧೧೦೦ ಕ್ಕಿಂತ ಹೆಚ್ಚು ಮತದಾರರಿರುವ ೨೦೯ ಮತಗಟ್ಟೆಗಳಲ್ಲಿ ಸರದಿಯಲ್ಲಿ ಹೆಚ್ಚು ಜನರಿದ್ದರೆ ಕ್ಯೂ ಮ್ಯಾನೇಜ್‌ಮೆಂಟ್ ವ್ಯವಸ್ಥೆ ಮಾಡಲಾಗುವುದು. ೨೦೦ಕ್ಕಿಂತ ಕಡಿಮೆ ಮತದಾರರಿರುವ ೧೬ ಮತಗಟ್ಟೆಗಳಿದ್ದು, ಅವರನ್ನೆಲ್ಲಾ ನಮ್ಮ ವ್ಯವಸ್ಥೆ ಮೂಲಕವೇ ಅವರನ್ನು ಮತಗಟ್ಟೆಗೆ ಕರೆತಂದು ಶೇ.೧೦೦ ಮತದಾನ ಮಾಡಿಸಲು ವಿಶೇಷ ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಾಡಿಗಳು, ಕುಗ್ರಾಮಗಳಲ್ಲಿರುವವರನ್ನು ಸರ್ಕಾರಿ ವಾಹನಗಳಲ್ಲೇ ಕರೆತಂದು ಮತದಾನ ಮಾಡಿಸಲಾಗುವುದು. ೨೬ ನಕ್ಸಲ್ ಮತಗಟ್ಟೆಗಳಲ್ಲಿ ಮತದಾನ ಹೆಚ್ಚಿಸಲು ವಿಶೇಷ ಅರಿವು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವ್ಯಾಪಕವಾಗಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುವುದು ಎಂದರು.

ಪೊಲೀಸ್ ಸ್ಟೇಷನ್‌ಗಳಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ಲೈವ್ ಮಾಹಿತಿಯನ್ನು ಮಾದ್ಯಮಗಳಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

Ashika S

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

22 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

32 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

37 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

44 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

54 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

58 mins ago