News Karnataka Kannada
Monday, April 29 2024
ಚಿಕಮಗಳೂರು

ಚಿಕ್ಕಮಗಳೂರು: ಚುನಾವಣೆ ಪ್ರಚಾರಕ್ಕೆ ಬಂದ ಸಿ.ಟಿ.ರವಿ ಬೆಂಬಲಿಗರಿಗೆ ಮತದಾರರ ತರಾಟೆ

Bhagirathi Murulya, a poor woman, would not have got a ticket if money was the dominant factor in the BJP
Photo Credit : News Kannada

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಅಖಾಡ ರಂಗೇರುತ್ತಿದೆ. ಬಿಜೆಪಿ ಶಾಸಕ ಸಿ.ಟಿ ರವಿ ವಿರುದ್ದ ಪರ ವಿರುದ್ದ ಹೇಳಿಕೆಗಳು ಕೂಡ ಜೋರಾಗಿದೆ. ಕಳೆದ ೨೦ ವರ್ಷಗಳಿಂದ ಶಾಸಕರಾಗಿರುವ ಸಿ.ಟಿ.ರವಿ ಏನು ಮಾಡಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಅವರಿಗೆ ೨೦ ವರ್ಷ ಸಾಕಾಗಿಲ್ವಾ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಹಾಗೂ ಸಿ.ಟಿ.ರವಿ ಸಂಬಂಧಿ ಆಗಿರುವ ಸುದರ್ಶನ್‌ಗೆ ಮತದಾರರು ಭರ್ಜರಿ ಕ್ಲಾಸ್ ತೆಗೆದುಕೊಂಡಿರುವ ಪ್ರಸಂಗ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ವಿಧಾನಸಭಾ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಸಕ ಸಿ.ಟಿ ರವಿ ಪರವಾಗಿ ಬಿಜೆಪಿ ಮುಖಂಡರು ಸಭೆ ನಡೆಸುತ್ತಿದ್ದಾರೆ. ತಾಲೂಕಿನ ಉದ್ದೇಬೋರ ಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಸಭೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಹಾಗೂ ಶಾಸಕ ಸಿ.ಟಿ. ರವಿ ಬಾವ ಮೈದುನ ಸುದರ್ಶನ್ ಚುನಾವಣಾ ಪ್ರಚಾರಕ್ಕೆಂದು ಭೇಟಿ ನೀಡಿದ್ದರು. ಈ ವೇಳೆ, ಮತದಾರರು ೨೦ ವರ್ಷದಿಂದ ಶಾಸಕರಾಗಿದ್ದಾರೆ. ಲಿಂಗಾಯತರ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ರಸ್ತೆ ಮಧ್ಯೆಯೇ ಬಿಜೆಪಿ ಮುಖಂಡರಿಗೆ ಕ್ಲಾಸ್: ಚುನಾವಣೆ ಬಂದಿದೆ ಎಂದು ಈಗ ಬಂದಿದ್ದೀರಾ ಇಷ್ಟು ವರ್ಷ ಎಲ್ಲಿಗೆ ಹೋಗಿದ್ರಿ ಎಂದು ಮತದಾರರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಮ್ಮ ಊರನ್ನ ಅಭಿವೃದ್ಧಿ ಮಾಡಲು ಸಿ.ಟಿ. ರವಿಗೆ ೨೦ ವರ್ಷ ಸಾಕಾಗಿಲ್ವಾ ಎಂದು ಪ್ರಚಾರಕ್ಕೆ ಹೋದವರಿಗೆ ಪ್ರಶ್ನಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪ್ರಚಾರದ ವರಸೆಯನ್ನೂ ಜೋರು ಮಾಡಿದೆ. ಸಿ.ಟಿ.ರವಿ ಸಂಬಂಧಿ ಸುದರ್ಶನ್, ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಗ್ರಾಮ ಮಟ್ಟದಲ್ಲಿ ಸಭೆ ಆರಂಭಿಸಿದ್ದಾರೆ.

ಸಭೆ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಉದ್ದೇಬೋರನಹಳ್ಳಿಗೆ ಹೋದಾಗ ಮತದಾರರು ಕ್ಲಾಸ್ ತೆಗೆದುಕೊಂಡಿದ್ದಾರೆ. ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡ ಹಿನ್ನೆಲೆ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಬಿಜೆಪಿ ಘಟಕ ಕೂಡ ಮುಜುಗರಕ್ಕೀಡಾಗಿದೆ.

ಬಿಜೆಪಿಯ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ: ಕಳೆದ ಹತ್ತು ದಿನಗಳ ಹಿಂದೆ ಬಿಜೆಪಿಯ ಪ್ರಚಾರ ಕಾರ್ಯಕ್ರಮದ ವೇಳೆ ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿಯಲ್ಲಿ ಬಿಜೆಪಿಯವರು ನೀಡಿದ ಸೀರೆಯನ್ನ ಮತದಾರರು ನಡು ರಸ್ತೆಯಲ್ಲಿ ಬೆಂಕಿ ಹಾಕಿದ್ದರು. ನಮಗೆ ಸೀರೆ ಬೇಡ, ಸೌಲಭ್ಯ ಬೇಕು ಎಂದು ಐದಾರು ಸೀರೆಗಳನ್ನ ನಡು ರಸ್ತೆಯಲ್ಲಿ ಸುಟ್ಟು ಹಾಕಿದ್ದರು.

ಇದೀಗ, ಪ್ರಚಾರ ಹಾಗೂ ಸಭೆಗೆ ಹೋದಾಗಲೂ ರಸ್ತೆಯಲ್ಲಿ ಕ್ಲಾಸ್ ತೆಗೆದುಕೊಂಡಿರುವುದು ಬಿಜೆಪಿ ವಲಯಕ್ಕೆ ಬಿಸಿ ತುಪ್ಪವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು