ಚಿಕ್ಕಮಗಳೂರು: ಬಿಜೆಪಿ ಸರ್ಕಾರದಿಂದ ಒಳ ಮೀಸಲು ಜಾರಿಗೆ

ಚಿಕ್ಕಮಗಳೂರು: ಸುಮಾರು ೩೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪರಿಶಿಷ್ಟ ಜಾತಿ ಗಳ ಒಳಮೀಸಲಾತಿ ಜಾರಿಯನ್ನು ಇಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿರುವುದನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ವಕ್ತಾರ ದೀಪಕ್‌ದೊಡ್ಡಯ್ಯ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು ಪರಿಶಿಷ್ಟ ಜಾತಿಯ ಒಳಗಿರುವ ಅನೇಕ ಉಪಜಾತಿಗಳಿಗೆ ಪ್ರತ್ಯೇಕ ಮೀಸಲಾತಿಯಿಲ್ಲದೇ ಎಲ್ಲ ರಿಗೂ ಅನ್ಯಾಯವಾಗುತ್ತಿತ್ತು. ಅದಕ್ಕಾಗಿ ರಾಜ್ಯದಲ್ಲಿ ಜನಸಂಖ್ಯೆಗೆ ಆಧಾರ ವಾಗಿ ಪರಿಶಿಷ್ಟ ಜಾತಿಯಲ್ಲೇ ಇರುವ ಉಪಜಾತಿಗಳನ್ನು ವರ್ಗೀಕರಿಸಿ ಮೀಸಲಾತಿ ನೀಡಬೇಕು ಎನ್ನುವುದು ಬಹುವರ್ಷಗಳ ಬೇಡಿಕೆಯಾಗಿದ್ದು ಅದಕ್ಕೆ ಸಂಬಂಧಿಸಿದಂತೆ ನೂರಾರು ಚಳುವಳಿಗಳು, ಪ್ರತಿಭಟನೆಗಳು ಮತ್ತು ಸತ್ಯಾಗ್ರಹಗಳು ನಡೆದಿದ್ದವು ಎಂದರು.

ಇದನ್ನು ಮನಗಂಡ ಧರ್ಮ ಸಿಂಗ್ ನೇತೃತ್ವದ ಸರ್ಕಾರ ಜಸ್ಟಿಸ್ ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಿತ್ತು. ಆ ಯೋಗವು ಆಳವಾದ ಅಧ್ಯಯನ ನಡೆಸಿ ವರದಿಯನ್ನು ಡಿ.ವಿ.ಸದಾ ನಂದಗೌಡ ಅವರ ಸರ್ಕಾರಕ್ಕೆ ಸಲ್ಲಿಸಿತ್ತು.

ಹಲವಾರು ಕಾರಣಗಳಿಂದ ಈ ವರದಿಯು ಜಾರಿಗೆ ಬರದೇ ನೆನೆ ಗುದಿಗೆ ಬಿದ್ದಿತ್ತು. ಇದರ ಅವಶ್ಕಕತೆ ಯನ್ನು ಅರ್ಥಮಾಡಿಕೊಂಡ ಬಸವ ರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರ ನೇತೃತ್ವದಲ್ಲಿ ಒಂದು ಸಮಿತಿ ರಚಿಸಿತ್ತು. ಸಮಿತಿ ಯು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ವರ್ಗೀಕರಿಸಿ ವರದಿ ನೀಡಿದ್ದು ಅದರಂತೆ ಮುಖ್ಯ ಮಂತ್ರಿಗಳು ಸಾಮಾಜಿಕ ನ್ಯಾಯ ಒದಗಿಸಿದ್ದಾರೆ ಎಂದರು.

ಎರಡು ಸಿ.ವರ್ಗದಡಿ ಒಕ್ಕಲಿಗ ಸಮು ದಾಯದವರಿಗೆ ಮೀಸಲಾತಿ ಪ್ರಮಾಣವನ್ನು, ಎರಡು ಡಿ.ವರ್ಗದ ಡಿ ವೀರಶೈವ ಲಿಂಗಾಯಿತ ಸಮುದಾಯದ ಮೀಸಲಾತಿ ಪ್ರಮಾಣವ ನ್ನು ಹೆಚ್ಚಿಸಿರುವುದು ಅಭಿನಂದನಾ ರ್ಹ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮು ಖಂಡರುಗಳಾದ ಟಿ.ರಾಜಶೇಖರ್, ಬೀಕನಹಳ್ಳಿ ಸೋಮಶೇಖರ್, ವೆಂಕ ಟೇಶ್, ದಿನೇಶ್, ಅಂಕಿತ ಉಪಸ್ಥಿತರಿದ್ದರು.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago