News Karnataka Kannada
Monday, April 29 2024
ಚಿಕಮಗಳೂರು

ಚಿಕ್ಕಮಗಳೂರು: ಮಾ.೨೬ ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ

The statue of Krantiveera Sangolli Rayanna will be unveiled on March 26.
Photo Credit : News Kannada

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವೃತ್ತದಲ್ಲಿ ಇದೇ ೨೬ ರಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಕಂಚಿನ ಪ್ರತಿಮೆ ಅನಾವರಣ ಮಾಡಲಾಗು ವುದು ಎಂದು ಜಿಲ್ಲಾ ಶ್ರೀಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ ೧೧.೩೦ ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೈರತಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ಶಾಸಕ ಸಿ.ಟಿ.ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿ ದ್ದು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎಂ.ಮಂಜು ನಾಥ, ತಾಲೂಕು ಅಧ್ಯಕ್ಷ ಡಿ.ಎಸ್. ಚಂದ್ರೇಗೌಡ ಮತ್ತಿತರೆ ಸಮುದಾ ಯದ ಮುಖಂಡರು, ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಕಾರ್ಯ ಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಬೆಳವಾಡಿ ಮಾತ ನಾಡಿ, ಬ್ರಿಟೀಷರ ವಿರುದ್ಧ ಹೋರಾ ಡಿದ್ದ ಸೊಂಗೊಳ್ಳಿ ರಾಯಣ್ಣ ಅವರ ಹೋರಾಟದ ವಾಸ್ತವಾಂಶ ಗಳನ್ನು ಇತಿಹಾಸದಲ್ಲಿಮರೆ ಮಾಚಲಾಗಿದೆ. ಹಿಂದಿನ ಸರಕಾರಗಳು ಸಂಗೊಳ್ಳಿರಾ ಯಣ್ಣ ಅವರನ್ನು ಮೂಲೆ ಗುಂಪು ಮಾಡಿವೆ. ನಮ್ಮ ಸರ ಕಾರದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪಿಸುವ ಮೂಲಕ ಮುಂದಿನ ಯುವ ಪೀಳಿಗೆಗೆ ಪೇರಣೆ ನೀಡಿದ್ದೇವೆ ಎಂ ದರು. ಮುಖಂಡರಾದ ನೆಟ್ಟೇಕೆರೆಹಳ್ಳಿ ಜಯಣ್ಣ, ಮೋಹನ್, ರಾಜು, ರಾಜೀವ್ ಮತ್ತಿತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು