ಚಿಕ್ಕಮಗಳೂರು: ಭದ್ರಾ ಕಾಲುವೆ ನೀರಿನಲ್ಲಿ ಮುಳುಗಿ ಮೂವರ ಸಾವು

ಚಿಕ್ಕಮಗಳೂರು : ರಾಜ್ಯದಲ್ಲಿ ನಿನ್ನೆ ಸುರಿದ ಗುಡುಗು-ಸಿಡಿಲು ಸಹಿತ ಬಿರುಗಾಳಿ ಮಳೆಯಿಂದಾಗಿ ೧೦ಕ್ಕೂ ಅಧಿಕ ಸಾವು ಸಾಂಭವಿಸಿವೆ. ಇನ್ನು ಚಿಕ್ಕಮಗಳೂರಿನಲ್ಲಿ ನೀರಿನ ಕಾಲುವೆಯ ಬಳಿ ಆಟವಾಡಲು ಹೋದ ವೇಳೆ ಕಾಲು ಜಾರಿ ಬಿದ್ದವ ರನ್ನು ಕಾಪಾಡಲು ಹೋಗಿ ಒಬ್ಬೊಬ್ಬ ರಂತೆ ಮೂವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಮೂವರು ಮುಳುಗಿ ಸಾವನ್ನಪ್ಪರುವ ಘಟನೆ ನಡೆದಿದೆ. ನೀರಿನಲ್ಲಿ ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೂವರು ಸಾವನ್ನಪ್ಪಿದ್ದಾರೆ.

ನೀರಿನಲ್ಲಿ ಆಟವಾಡುವಾಗ ಒಬ್ಬರ ರಕ್ಷಣೆಗೆ ಮತ್ತೊಬ್ಬರು ಹೋಗಿ ದುರಂತ ಸಂಭವಿಸಿದೆ. ಮೃತರನ್ನು ರವಿ (೩೧), ಅನನ್ಯ (೧೭) ಹಾಗೂ ಶಾಮವೇಣಿ (೧೬) ಎಂದು ಗುರುತಿಸಲಾಗಿದೆ.

ರವಿ ಮೂಲತಃ ಲಕ್ಕವಳ್ಳಿ ನಿವಾಸಿ ಆಗಿದ್ದಾನೆ. ಇನ್ನು ಅನನ್ಯ ಮತ್ತು ಶಾಮವೇಣಿ ಇಬ್ಬರೂ ರವಿಯ ಸಹೋದರಿಯರ ಮಕ್ಕಳಾಗಿದ್ದರು. ನೀರಿನಲ್ಲಿ ಆಟವಾಡಲು ಹೋಗಿ ದುರಂತ ಸಂಭವಿಸಿದೆ.

ರವಿ ಅವರ ಅಕ್ಕಂದಿರನ್ನು ಶಿವಮೊಗ್ಗ ಮತ್ತು ನಂಜನಗೂಡಿಗೆ ಮದುವೆ ಮಾಡಿಕೊಡಲಾಗಿತ್ತು. ಅನನ್ಯ ಮೂಲತಃ ಶಿವಮೊಗ್ಗದ ನಿವಾಸಿ ಆಗಿದ್ದು, ಶಾಮವೇಣಿ ನಂಜನಗೂಡಿ ನವರು ಎಂದು ತಿಳಿದುಬಂದಿದೆ.

ಇಬ್ಬರೂ ಸಹೋದರಿಯರ ಮಕ್ಕಳಾದ್ದರಿಂದ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಲಕ್ಕವಳ್ಳಿಯ ಸಂಬಂಧಿಕರ ಮನೆಗೆ ಬಂದಿದ್ದರು. ಬೆಳಗ್ಗೆಯೇ ಭದ್ರಾ ಜಲಾಶಯದ ಕಾಲುವೆಯ ಬಳಿ ಆಟವಾಡಲು ಹೋದಾಗ ಈ ಘಟನೆ ನಡೆದಿದ್ದು, ಮೃತ ರವಿ ದೇಹ ಮಾತ್ರ ಲಭ್ಯವಾಗಿದೆ.

ಉಳಿದಂತೆ ಅನನ್ಯ ಹಾಗೂ ಶಾಮವೇಣಿ ಅವರ ಮೃತದೇಹಕ್ಕಾಗಿ ಶೋಧ ಮಾಡಲಾಗುತ್ತಿದೆ. ಈ ಘಟನೆ ಕುರಿತಂತೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Sneha Gowda

Recent Posts

ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ : ನರೇಂದ್ರ ಮೋದಿ

ಲೋಕಸಭೆ ಚುನಾವಣೆಯ ಬಿಸಿ ಮತ್ತಷ್ಟು ಹೆಚ್ಚಾಗುತ್ತಿದ್ದು, ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಮತ್ತಷ್ಟು ತಾರಕಕ್ಕೇರುತ್ತಿದೆ. ನಾವು ಅಧಿಕಾರಕ್ಕೆ ಬಂದರೆ…

9 mins ago

ಜಮ್ಮು ಕಾಶ್ಮೀರದಲ್ಲಿ ಧಾರಕಾರ ಮಳೆ: ಭೂಕುಸಿತ, ಹಲವು ಮನೆ ಹಾನಿ

ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಮಳೆಯಿಂದ ಭೂಕುಸಿತ…

31 mins ago

ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

50 mins ago

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

1 hour ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

2 hours ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

2 hours ago