ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು

ಚಿಕ್ಕಮಗಳೂರು: ಕಾಲೇಜಿನಿಂದ ಒಂದು ದಿನದ ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಗುಂಪು ತುಂಗಾ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಒಬ್ಬ ಮುಳುಗು ವುದನ್ನು ರಕ್ಷಣೆ ಮಾಡಲು ಹೋಗಿದ್ದವನು ಸೇರಿ ಒಟ್ಟು ಇಬ್ಬರು ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ಹರಿಹರಪುರದ ರಕ್ಷಿತ್ (೨೦) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ (೨೧) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಬಳಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ.

ಕಾಲೇಜಿನ ವಿದ್ಯಾರ್ಥಿಗಳು ಸೇರಿಕೊಂಡು ಒಂದು ದಿನದ ಹೊರ ಸಂಚಾರಕ್ಕೆ ಹೋಗಿದ್ದಾರೆ. ಈ ವೇಳೆ ನದಿ ನೀರಿನಲ್ಲಿ ವಿದ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದ ರಕ್ಷಿತ್ ಹಾಗೂ ಪ್ರಜ್ವಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ರಕ್ಷಿತ್ ರಕ್ಷಣೆಗೆಂದು ಹೋದವ ಸಾವು: ಇನ್ನು ಮೃತ ವಿದ್ಯಾರ್ಥಿಗಳನ್ನು ಶೃಂಗೇರಿ ಪಟ್ಟಣದ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳು ಆಗಿದ್ದಾರೆ. ನದಿಯಲ್ಲಿ ಈಜಾಡುತ್ತಿದ್ದಾಗ ರಕ್ಷಿತ್ ಸಿಲುಕಿಕೊಂಡು ಮುಳುಗಿತ್ತಿದ್ದನು. ಈ ವೇಳೆ ರಕ್ಷಿತ್‌ನ ರಕ್ಷಣೆಗೆಂದು ಪ್ರಜ್ವಲ್ ತೆರಳಿದ್ದಾನೆ. ಇದನ್ನು ನೋಡಿದ ವಿದ್ಯಾರ್ಥಿಗಳು ಕೂಡಲೇ ಸ್ಥಳೀಯರನ್ನು ಕೂಗಿದ್ದಾರೆ. ಸುತ್ತಲೂ ನುರಿತ ಈಜುಗಾರರು ಯಾರೂ ಇಲ್ಲದ ಹಿನ್ನೆಲೆಯಲ್ಲಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿದ್ದಾರೆ. ಇನ್ನು ಘಟನೆಯ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ…

6 mins ago

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ವೈರಲ್; ಸ್ಫೋಟಕ ಟ್ವಿಸ್ಟ್ ಕೊಟ್ಟ ಚಾಲಕ !

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಶುರುವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ…

10 mins ago

ಒಳ ಉಡುಪಿನಲ್ಲಿ 49 ಲಕ್ಷ ಮೌಲ್ಯದ ಚಿನ್ನ ಸಾಗಾಟ : ಇಬ್ಬರು ಮಹಿಳೆಯರ ಬಂಧನ

ಒಳ ಉಡುಪಿನಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಕೆಂಪೇಗೌಡ ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

30 mins ago

ಅಶ್ಲೀಲ ವಿಡಿಯೋ ಪ್ರಕರಣ : ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣ​​ ಅಮಾನತು

ಅಶ್ಲೀಲ ವಿಡಿಯೋ ಬಹಿರಂಗ ವಿಚಾರವಾಗಿ ಹಾಸನ ಜೆಡಿಎಸ್‌ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಜೆಡಿಎಸ್…

43 mins ago

ನಕ್ಸಲರು ಮತ್ತು ಪೊಲೀಸರ ನಡುವೆ ಫೈರಿಂಗ್‌ : 7 ಜನ ನಕ್ಸಲರ ಎನ್‌ಕೌಂಟರ್‌

ಛತ್ತೀಸ್​​ಗಢದ ನಾರಾಯಣಪುರ ಮತ್ತು ಕಂಕೇರ್​ ಜಿಲ್ಲೆಯ ಗಡಿಭಾಗದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ದಾಳಿ ನಡೆದಿದ್ದು ದಾಳಿಯಲ್ಲಿ…

1 hour ago

ನಕ್ಸಲರು – ಪೊಲೀಸರ ನಡುವೆ ಗುಂಡಿನ ದಾಳಿ: 2 ಮಹಿಳೆಯರು, 7 ನಕ್ಸಲರು ಬಲಿ

ಬ್ಬರು ಮಹಿಳೆಯರು ಸೇರಿ ಏಳು ನಕ್ಸಲರು ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಛತ್ತೀಸ್​​ಗಢದಲ್ಲಿ ನಡೆದಿದೆ.

1 hour ago