News Karnataka Kannada
Friday, May 10 2024
ಚಿಕಮಗಳೂರು

ಚಿಕ್ಕಮಗಳೂರು: ಮತದಾನ ಕುರಿತು ಜಾಗೃತಿ ಮೂಡಿಸಲು ಐಕಾನ್‌ಗಳ ಬಳಕೆ

Chikkamagaluru: Use of icons to create awareness about voting
Photo Credit : News Kannada

ಚಿಕ್ಕಮಗಳೂರು: ಏಕಲವ್ಯ ಪ್ರಶಸ್ತಿ ವಿಜೇತರಾದ ಜಿಲ್ಲೆಯ ಶವಾದ್,ವಿಶೇಷ ಚೇತನರ ಕ್ಷೇಮಾಭಿವೃದ್ಧಿಗೆ ಶ್ರಮಿಸಿರುವ ಮೋಹನ್‌ಗೌಡ, ಮಹಿಳಾ ಕ್ರಿಕೆಟ್ ಆಟಗಾರ್ತಿ ಕಡೂರಿನ ವೇದಕೃಷ್ಣ ಮೂರ್ತಿ ಹಾಗೂ ಕನ್ನಡ ಪೂಜಾರಿ ಎಂದೇ ಖ್ಯಾತರಾಗಿರುವ ಹಿರೇಮಗಳೂರು ಕಣ್ಣನ್ ಅವರನ್ನು ೨೦೨೩ರ ವಿಧಾನಸಭೆ ಚುನಾವಣೆಯ ಐಕಾನ್‌ಗಳಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಐಕಾನ್‌ಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಚುನಾವಣೆ ಜಾಗೃತಿ ಮತ್ತು ಸಂದೇಶಗಳನ್ನು ನೀಡಲಾಗುತ್ತದೆ. ಈ ಐಕಾನ್‌ಗಳ ಧ್ವನಿ ಸುರುಳಿ ಮತ್ತು ವಿಡಿಯೋಗಳನ್ನು ಬಳಸಿ ಮತದಾನದ ಬಗ್ಗೆ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ತಯಾರಿ ಭರದಿಂದ ಸಾಗುತ್ತಿದೆ. ಎ.೧೩ರಿಂದ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದೆ. ಅಲ್ಲಿಂದ ಚುನಾವಣೆ ಪ್ರಕ್ರಿಯೆ ಮತ್ತಷ್ಟು ವೇಗವನ್ನು ಪಡೆದುಕೊಳ್ಳಲಿದೆ. ನಾಮಪತ್ರ ಸ್ವೀಕೃತಿ ಸಂಬಂಧ ಐದು ವಿಧಾನಸಭಾ ಕ್ಷೇತ್ರಗಳ ರಿಟನಿಂಗ್ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದ ಅವರು, ನಾಮಪತ್ರ ಸ್ವೀಕಾರದ ಸ್ಥಳ, ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಈಗಾಗಲೇ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಮಾಹಿತಿಯನ್ನು ನೀಡಲಾಗಿದೆ. ಎ.೨೦ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದೆ ಎಂದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಪರಿಷ್ಕರಣೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಎ.೧೧ರಂದು ಮಂಗಳವಾರ ಸಂಪೂ ರ್ಣ ಮುಕ್ತಾಯವಾಗಲಿದೆ. ನಂತg ಯಾವುದೇ ಅರ್ಜಿಗಳನ್ನು ಸ್ವೀಕರಿಸು ವುದಿಲ್ಲ ಎಂದ ಅವರು, ರಾಜಕೀಯ ಪಕ್ಷಗಳು ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ಜಿ.ಪಂ.ಸಿಇಒ ಜಿ.ಪ್ರಭು ಮಾತ ನಾಡಿ, ೨೦೨೩ರ ಚುನಾವಣೆಯಲ್ಲಿ ಶೇ.೮೫ರಷ್ಟು ಮತದಾನದ ಗುರಿಯ ನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ೩೦ ದಿನಗಳ ಕಾಲ ಪ್ರತೀ ಮತಗಟ್ಟೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ. ೨೦೧೮ರ ಚುನಾವಣೆಯಲ್ಲಿ ಜಿಲ್ಲೆಯ ೨೩೭ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಕಡಿಮೆಯಾಗಿದ್ದು, ಇಂತಹ ಮತಗಟ್ಟೆಗಳಲ್ಲಿ ಜನ ಜಾಗೃತಿ ಮೂಡಿಸಲು ಅಂಗನವಾಡಿ, ಆಶಾ ಕಾರ್ಯಕರ್ತ ರು ಸೇರಿದಂತೆ ಇತರ ಸಿಬ್ಬಂದಿಯನ್ನು ಬಳಸಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಚುನಾವಣೆ ಐಕಾನ್‌ಗಳಾದ ಏಕಲವ್ಯ ಪ್ರಶಸ್ತಿ ವಿಜೇತ ಶವಾದ್, ವಿಶೇಷ ಚೇತನರ ಕ್ಷೇಮಾಭಿವೃದ್ಧಿಗೆ ಶ್ರಮಿಸಿರುವ ಮೋಹನ್‌ಗೌಡ ಅವರನ್ನು ಸನ್ಮಾನಿಸಲಾಯಿತು. ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸೋಮಶೇಖರ್, ವಾರ್ತಾಧಿಕಾರಿಮಂಜೇಗೌಡ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು