ಚಿಕ್ಕಮಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದಂತೆ ಕೊಟ್ಟ ಭರವಸೆ ಈಡೇರಿಸಿದ್ದಕ್ಕೆ ಸ್ವಾಗತಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ದೆಹಲಿಯಲ್ಲಿ ಮಾಧ್ಯವರೊಂದಿಗೆ ಮಾತನಾಡಿದ ಅವರು, ಯೋಜನೆಯನ್ನು ಸರಿಯಾಗಿ ಅನುಷ್ಠಾನಕ್ಕೆ ತರುವ ಕೆಲಸ ಆಗಲಿ ಪ್ರಣಾಳಿಕೆಯಲ್ಲಿ ಮುದ್ರಿಸಿರುವಂತೆ ಪ್ರತಿ ವ್ಯಕ್ತಿ ಅಂತಾ ಹೇಳಿದ್ದರು. ಆದರೆ ಈಗ ಘೋಷಣೆ ವೇಳೆ ಕುಟುಂಬಕ್ಕೆ ಅಂತಾ ಹೇಳಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಿ, ಖರ್ಚು ವೆಚ್ಚ ಸೇರಿ ಯೋಜನೆಗಳಿಗೆ ಎಷ್ಟು ಹಣ ಮಾಹಿತಿ ಕೊಡಿ ರಾಜ್ಯದ ಜನ ಆರ್ಥಿಕ ವೆಚ್ಚದ ಒಂದು ನಿಲುವಿಗೆ ಬರಬೇಕಾಗಿದೆ ನಿಮ್ಮ ಗ್ಯಾರೆಂಟಿಗಳು ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಆಗೋದು ಬೇಡ. ನಿಮ್ಮ ಗ್ಯಾರೆಂಟಿಗಳು ಒಳಪೆಟ್ಟು ಕೊಟ್ಟ ಹಾಗೆ ಆಗಬಾರದು ಎಂದರು.
ನಾನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡು ಕೆಲಸ ಮಾಡ್ತಿಲ್ಲ. ಪಕ್ಷ ವಹಿಸಿದ ಕೆಲಸ ಮಾಡುತ್ತಾ ಬಂದಿದ್ದೇನೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಾಕಷ್ಟು ಕೆಲಸಗಳಿವೆ. ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.