ಚಿಕ್ಕಮಗಳೂರು, ಜ.5: ಕಾಡೆಮ್ಮೆಗಳ ದಾಳಿಯಿಂದ ಮನೋಜ್ ಎಂಬ ಯುವಕ ಗಾಯಗೊಂಡಿರುವ ಘಟನೆ ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ.
ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರು ತೋಟದಲ್ಲಿದ್ದಾಗ ಕಾಡೆಮ್ಮೆಗಳು ಇದ್ದಕ್ಕಿದ್ದಂತೆ ಅವರ ಮೇಲೆ ದಾಳಿ ನಡೆಸಿದವು ಎಂದು ತಿಳಿದುಬಂದಿದೆ.
ಕಳೆದ 15 ದಿನಗಳಲ್ಲಿ ನಡೆದ ಮೂರನೇ ದಾಳಿ ಇದಾಗಿದ್ದು, ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.