ಚಿಕಮಗಳೂರು: ಬಿಜೆಪಿಯವರು ತೋರಿಸುವ ಆಸೆ ಆಕಾಂಕ್ಷೆಗಳಿಗೆ ಒಳಗಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಪಿ ಮಂಜೇಗೌಡ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದರು.
ಅವರು ಇಂದು ಹಂಪಾಪುರ ಗ್ರಾಮ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಿದರು. ಗ್ರಾಮದ ಮನೆಮನೆಗಳಿಗೆ ತೆರಳಿದ ಅವರು ಬಿಜೆಪಿ ಆಡಳಿತದಲ್ಲಿ ಮತದಾರರಿಗೆ ಆಗಿರುವ ಅನ್ಯಾಯದ ಬಗ್ಗೆ ತಿಳಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಸಾಮಾನ್ಯ ಜನರು ಬದುಕಲು ಸಾಧ್ಯವಾಗುತ್ತದೆ ಎಂದರು.
ಬಿಜೆಪಿ ಆಡಳಿತದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಮಹಿಳೆಯರ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಪ್ರತಿ ತಿಂಗಳಿಗೆ ಜಿಎಸ್ಟಿ ಪರಿಹಾರಕ್ಕೆ 500 ರೂಪಾಯಿ, ಗ್ಯಾಸ್ ಸಿಲಿಂಡರ್ ಗೆ 500 ಹಾಗೂ ಬೆಲೆ ಏರಿಕೆಯ ಪರಿಹಾರಕ್ಕೆ ಒಂದು ಸಾವಿರ ರೂಪಾಯಿ ಸೇರಿದಂತೆ ಒಟ್ಟು 2 ಸಾವಿರ ರೂಪಾಯಿಗಳನ್ನು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ನೀಡಲಿದೆ ಎಂದರು. ಅಲ್ಲದೆ ಪ್ರತಿ ಮನೆಗೂ ಪ್ರತಿ ತಿಂಗಳು ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಿದೆ. ಹಾಗೂ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಮೂರು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನೀಡಲಾಗುತ್ತದೆ ಎಂದರು.
ಸದೃಢ ಹಾಗೂ ಸುರಕ್ಷಿತ ಕುಟುಂಬಕ್ಕಾಗಿ ಈ ಬಾರಿ ಕಾಂಗ್ರೆಸ್ ಗೆ ಎಲ್ಲರೂ ಮತ ಚಲಾಯಿಸಬೇಕೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಹೋಬಳಿ ಅಧ್ಯಕ್ಷರಾದ ನಾಗಭೂಷಣ್, ಭೂತ್ ಅಧ್ಯಕ್ಷರಾದ ಚಂದ್ರೇಗೌಡ, ಮುಖಂಡರಾದ ರಾಜು, ಜಯಣ್ಣ, ಲಕ್ಷ್ಮಣ್, ಮಹೇಶ್ ಇನ್ನಿತರರು ಉಪಸ್ಥಿತರಿದ್ದರು.
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…