ಚಿಕ್ಕಮಗಳೂರು: ಹೆಲ್ಮೆಟ್ ಧರಿಸಿದೇ ಬೈಕಿನಲ್ಲಿ ಸಾಗುತ್ತಿದ್ದ ವಕೀಲನ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಡಿವೈಎಸ್ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಇಂದು ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿಲಾಗಿದೆ. ಈ ಬಗ್ಗೆ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಸ್ಪಷ್ಟಪಡಿಸಿದ್ದಾರೆ.
ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30 ರಂದು ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್, ಒಬ್ಬ ಎಎಸ್ಐ, ಒಬ್ಬ ಹೆಡ್ ಕಾಸ್ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆ ಠಾಣೆ ಮುಂದೆ ವಕೀಲರು ಜಮಾಯಿಸಿ ಆಕ್ರೋಶ ಹೊರಹಾಕಿದ್ದರು. ಈ ನಡುವೆ, ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು ಇದೀಗ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.