ಚಿಕ್ಕಮಗಳೂರು: ಕೇಂದ್ರ ಸರ್ಕಾರ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಿ ರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯ ಕರ್ತರು ನಗರದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಇಂದು ನಗರದ ಗಾಂಧಿ ಪ್ರತಿಮೆ ಎದುರು ಜಮಾವಣೆಗೊಂಡ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಎಂ.ಎಲ್. ಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಕಾರ್ಯ ಕರ್ತರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ದುರುಪ ಯೋಗಪಡಿಸಿಕೊಂಡು ದಾಳಿ ನಡೆಸಲಾಗುತ್ತಿದೆ.
ಬಿಜೆಪಿ ಪಕ್ಷದ ಕಾರ್ಯಕರ್ತರ ಮನೆಗಳ ಮೇಲೆ ಯಾಕೆ ದಾಳಿ ಯಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಬಿಜೆಪಿ ಪಕ್ಷ ರಾಜ್ಯವನ್ನು ಲೂಟಿ ಹೊಡೆಯುತ್ತಿದೆ. ತನಿಖಾ ಸಂಸ್ಥೆಗಳಿಗೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಕೇಂದ್ರ ಕರ್ಸಾರದ ಲೋಪಗಳನ್ನು ಪ್ರಶ್ನಿಸಿದ ಪರಿಣಾಮ ರಾಹು ಲ್ ಗಾಂಧಿಯವರ ಸಂಸತ್ ಸದಸ್ಯತ್ವ ರದ್ದುಪಡಿಸುವ ಮೂಲಕ ರಾಹುಲ್ ಗಾಂಧಿಯವರ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗಿದೆ ಎಂದು ದೂರಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾಮಾನ್ಯ ಜನತೆ ಬದುಕಲು ಅಸಾಧ್ಯವಾಗಿದೆ. ಬೆಲೆಏರಿಕೆ ನಿರಂತರವಾಗಿ ನಡೆಯುತ್ತಿದೆ. ಇಂತಹ ವಾತವರಣದಲ್ಲಿ ಜನರು ಮೌನವಾಗಿದ್ದರೇ ಪ್ರಜಾಪ್ರಭು ತ್ವದ ಹರಣವಾಗುತ್ತದೆ ಈ ನಿಟ್ಟಿನಲ್ಲಿ ಜನರು ಎಚ್ಚೇತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದ್ದು, ಇದ್ಯಾವು ದಕ್ಕೂ ಕಾಂಗ್ರೆಸ್ ಪಕ್ಷ ಜಗ್ಗುವುದಿಲ್ಲ. ರಾಹುಲ್ ಗಾಂಧಿಯವರು ದಂಡ ಕಟ್ಟುವುದಿಲ್ಲ. ಕ್ಷಮೆ ಕೇಳುವುದಿಲ್ಲ. ಜನರಿಗಾಗಿ ಜೈಲಿಗೆ ಹೋಗಲು ಸಿದ್ಧವಾಗಿದ್ದು, ಅವರೊಂದಿಗೆ ನಾವು ಕೂಡ ಜೈಲಿಗೆ ಹೋಗಲು ಸಿದ್ಧ ಎಂದು ಹೇಳಿದರು.
ಈ ಸಂದರ್ಭಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲೇಶ್, ಪುಟ್ಟೇ ಗೌಡ, ನಯಾಜ್, ಎಚ್.ಪಿ.ಮಂಜೇ ಗೌಡ, ಹಿರೇ ಮಗಳೂರು ಪುಟ್ಟ ಸ್ವಾಮಿ, ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇ ಗೌಡ ಸೇರಿದಂತೆ ಅನೇಕರು ಇದ್ದರು.