News Karnataka Kannada
Wednesday, May 01 2024
ಚಿಕಮಗಳೂರು

ನಾನು ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಸಿ.ಟಿ. ರವಿ

CT said that I will not go to Vijayendra Padgrahan program. Ravi
Photo Credit : News Kannada

ಚಿಕ್ಕಮಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಸಿಗದ ಕಾರಣ ಸಿ.ಟಿ ರವಿ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದಾರೆ. ಈ ನಡುವೆ, ಸೋಮಣ್ಣ, ಸಿಟಿ ರವಿ, ಯತ್ನಾಳ್ ಸಹಿತ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ವಿಜಯೇಂದ್ರ ಅವರು ಯತ್ನಿಸುತ್ತಿದ್ದಾರೆ. ನವೆಂಬರ್ 15 ರಂದು ನಡೆಯುವ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಸ್ಥಾನದ ಆಕಾಂಕ್ಷಿಗಳು, ಅದರಲ್ಲೂ ಇದ್ದ ಎಲ್ಲಾ ಅಧಿಕಾರಗಳು ಕೈತಪ್ಪಿ ಖಾಲಿಯಾಗಿರುವ ಸಿಟಿ ರವಿ ಅವರು ಆಗಮಿಸುತ್ತಾರೋ ಇಲ್ಲವೋ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿತ್ತು.

ಈ ಬಗ್ಗೆ ಸ್ವತಃ ಸಿಟಿ ರವಿ ಅವರೇ ಮಾತನಾಡಿದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ ನಾನು ಹೋಗಲ್ಲ ಎಂದಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರು ನನ್ನ ಜೊತೆ ಎರಡು ಬಾರಿ ದೂರವಾಣಿ ಕರೆ ಮೂಲಕ ಮಾತನಾಡಿದ್ದಾರೆ. ಆದರೆ, ನ.15ರ ರಾತ್ರಿವರೆಗೂ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಇದೆ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲ್ಲ. ಈ ಬಗ್ಗೆ ಅವರಿಗೆ ತಿಳಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು