News Karnataka Kannada
Monday, April 29 2024
ಚಿಕಮಗಳೂರು

ದತ್ತ ಜಯಂತಿ ಹಿನ್ನೆಲೆ: ಇಬ್ಬರು ಅರ್ಚಕರು ಸೇರಿ ಐವರಿಗೆ ಗನ್​ಮ್ಯಾನ್ ನೇಮಕ

Datta Jayanti: Gunman appointed for five people, including two priests
Photo Credit : News Kannada

ಚಿಕ್ಕಮಗಳೂರು: ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ  ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಬ್ಬರು ಅರ್ಚಕರು ಸೇರಿದಂತೆ ಐವರಿಗೆ ಅಂಗರಕ್ಷರನ್ನ ನೇಮಿಸಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆದೇಶ ಹೊರಡಿಸಿದ್ದಾರೆ.

ದತ್ತ ಜಯಂತಿ ಆಚರಣೆ ಹಿನ್ನೆಲೆ 15 ದಿನಗಳ ಕಾಲ ಐವರ ಭದ್ರತೆಗಾಗಿ ಗನ್​ಮ್ಯಾನ್​ಗಳನ್ನು ನೇಮಕ ಮಾಡಲಾಗಿದ್ದು, ದಿನದ 24 ಗಂಟೆಗಳ ಕಾಲವೂ ಭದ್ರತೆ ನೀಡಲಾಗುತ್ತದೆ.

ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಇಬ್ಬರು ಅರ್ಚಕರಾದ ಶ್ರೀಧರ್ ಪೂಜಾರ್, ಶಿವಾರಂ, ಇಬ್ಬರು ಮುಜಾವರ್​ಗಳಾದ ಸೈಯದ್ ಅಖಿಲ್ ಪಾಷ, ಇಸ್ಮಾಯಿಲ್​ ಹಾಗೂ ವ್ಯವಸ್ಥಾಪನ ಸಮಿತಿ ಮುಸ್ಲಿಂ ಸದಸ್ಯ ಭಾಷಾ ಅವರಿಗೆ ಒಬ್ಬಬ್ಬೊ ಅಂಗರಕ್ಷಕರನ್ನು ನೇಮಿಸಲಾಗಿದೆ.

ದತ್ತ ಜಯಂತಿ ಆಚರಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಾಲಾಧಾರಿಗಳು ಡಿಸೆಂಬರ್ 26ರಂದು ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು