News Karnataka Kannada
Saturday, April 27 2024
ಚಿಕಮಗಳೂರು

ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಲು ಜಿಲ್ಲಾ ಬಿಜೆಪಿ ಯುವಮೋರ್ಚಾ ಆಗ್ರಹ

ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರಆಟೋಚಾಲಕರ ಬಳಿ ಮತದಾನ ಜಾಗೃತಿಕಾರ್ಯಕ್ರಮ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಚುನಾವಣಾಧಿಕಾರಿ ಮೇನಕಾ ವಿ.ಚೌಹಾಣ್‌ ಅವರನ್ನು ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದುಜಿಲ್ಲಾ ಬಿಜೆಪಿ ಯುವ ಮೋರ್ಚಾ ಒತ್ತಾಯಿಸಿದೆ.
Photo Credit : NewsKarnataka

ಚಿಕ್ಕಮಗಳೂರು: ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರಆಟೋಚಾಲಕರ ಬಳಿ ಮತದಾನ ಜಾಗೃತಿಕಾರ್ಯಕ್ರಮ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ಚುನಾವಣಾಧಿಕಾರಿ ಮೇನಕಾ ವಿ.ಚೌಹಾಣ್‌ ಅವರನ್ನು ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದುಜಿಲ್ಲಾ ಬಿಜೆಪಿ ಯುವ ಮೋರ್ಚಾ ಒತ್ತಾಯಿಸಿದೆ.

ಮಾ.೨೬ ರಂದು ಬೆಳಗ್ಗೆ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಕಾರ್ಯಕರ್ತರ ತಂಡ ನಗರದ ಖಾಸಗಿ ಬಸ್ ನಿಲ್ದಾಣದ ಹತ್ತಿರಆಟೋ ಚಾಲಕರೊಂದಿಗೆ ಮತದಾನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಎಎಸ್ಪಿ ನೇತೃತ್ವದ ಪೊಲೀಸ್‌ ತಂಡ ಆಗಮಿಸಿ ಏಕಾಏಕಿ ಯುವ ಮೋರ್ಚಾಕಾರ್ಯಕರ್ತರನ್ನು ಬಂಧಿಸಿರುವುದನ್ನು ಜಿಲ್ಲಾಯುವ ಮೋರ್ಚಾ ಖಂಡಿಸುತ್ತದೆ ಎಂದು ಗುರುವಾರ ಜಿಲ್ಲಾ ಚುನಾವಣಾಧಿಕಾರಿಗೆ ನೀಡಿರುವ ಮನವಿಯಲ್ಲಿಜಿಲ್ಲಾ ಬಿಜೆಪಿ ಯುವ ಮೋರ್ಚಾಅಧ್ಯಕ್ಷ ಸಂತೋಷ್‌ಕೋಟ್ಯಾನ್ ತಿಳಿಸಿದ್ದಾರೆ.

ಮತದಾನದ ಮಹತ್ವ, ಮತದಾನ ಮಾಡುವ ಉದ್ದೇಶ ಸೇರಿದಂತೆ ಮತದಾನದ ಬಗ್ಗೆ ಜಾಗೃತಿ ಮೂಡಿಸು ವಕಾರ್ಯ ಶಾಂತಿಯುತವಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ತಮ್ಮ ಕೈಯಲ್ಲಿ ಹಿಡಿದಿದ್ದ ದೇಶದ ಹೆಮ್ಮಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವನ್ನುಒತ್ತಾಯಪೂರ್ವಕವಾಗಿ ಪೊಲೀಸರು ವಶಕ್ಕೆ ಪಡೆದುಕೊಳ್ಳುವ ಮೂಲಕ ಜಿಲ್ಲಾಡಳಿತ ಒಂದು ಪಕ್ಷದ ಪರವಾಗಿ ಏಕಪಕ್ಷೀಯವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ನಗರಪೊಲೀಸ್‌ಠಾಣೆಯಲ್ಲಿಕ್ರೈಂ ನಂ.೫೧/೨೦೨೪ ರಅಡಿಯಲ್ಲಿ ಕಲಂ ೧೮೮ ಐಪಿಸಿ ಪ್ರಕಾರಯುವ ಮೋರ್ಚಾಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿದ್ದು, ಸದರಿ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ನೊಂದಾಯಿಸಿರುವುದಿಲ್ಲ. ಆದರೆ, ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೆಂದು ಉಲ್ಲೇಖಿಸಲಾಗಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.

ಇಷ್ಟೆಲ್ಲ ಘಟನೆಗಳಿಗೆ ಚುನಾವಣಾಧಿಕಾರಿ ಮೇನಕಾ ವಿ.ಚೌಹಾಣ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸಿರುವುದು ಕಾರಣವಾಗಿರುತ್ತದೆ. ಸುಳ್ಳು ಪ್ರಕರಣ ದಾಖಲಿಸಲು ಕಾರಣರಾಗಿರುವ ಈ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಚುನಾವಣಾ ಕಾರ್ಯಗಳು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಅವರನ್ನು ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಯುವ ಮೋರ್ಚಾಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಯುವ ಮೋರ್ಚಾಉಪಾಧ್ಯಕ್ಷೆಅಂಕಿತಾ, ಪ್ರಧಾನ ಕಾರ್ಯದರ್ಶಿ ಸಚಿನ್, ಕಾರ್ಯದರ್ಶಿ ಶಶಿ ಆಲ್ದೂರು, ಖಜಾಂಚಿ ಭರತ್, ನಗರಯುವ ಮೋರ್ಚಾಅಧ್ಯಕ್ಷಜೀವನ್‌ಕೋಟೆ, ಪ್ರಧಾನ ಕಾರ್ಯದರ್ಶಿಗೌತಮ್‌ಅಟಕ್, ಪುನಿತ್, ಪ್ರಮುಖರಾದ ಮಂಜುನಾಥ್, ಮಧು, ಪ್ರಶಾಂತ, ಪಾರ್ಥಿಬನ್, ಕಾರ್ತಿಕ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು