ಚಿಕ್ಕಮಗಳೂರು: ಹಾಸನದಲ್ಲಿ ಆನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಸಾವಿನ ನಂತರ ಕಾಡಾನೆಗಳ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಬಲಿಷ್ಠ ಸಾಕಾನೆಗಳ ತಂಡದೊಂದಿಗೆ ಶೀಘ್ರ ಕಾರ್ಯಾಚರಣೆ ಮತ್ತೆ ಆರಂಭಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸುತ್ತಿದೆ.
ಆರು ಕಾಡಾನೆಗಳನ್ನು ಸೆರೆ ಹಿಡಿಯಲು ಸರಕಾರದಿಂದ ಅನುಮತಿ ದೊರೆತಿದ್ದು, ಈ ಪೈಕಿ ಒಂದು ಆನೆಯನ್ನು ಮಾತ್ರ ಹಿಡಿಯಲಾಗಿದೆ. ಇನ್ನೂ ಐದು ಆನೆಗಳಿಗೆ ರೆಡಿಯೊ ಕಾಲರ್ ಅಳವಡಿಸಿ ಸ್ಥಳಾಂತರಿಸುವ ಹೊಣೆ ಅರಣ್ಯ ಇಲಾಖೆ ಮೇಲಿದೆ. ಕಾರ್ಯಾಚರಣೆ ವೇಳೆ ಒಂದು ಕಾಡಾನೆ ಮೃತಪಟ್ಟಿದ್ದು, ಅದನ್ನು ಸೆರೆ ಹಿಡಿದ ಆನೆಗಳ ಪಟ್ಟಿಗೆ ಸೇರಿಸಲಾಗುವುದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆಲ್ದೂರು ಭಾಗದಲ್ಲಿ ಇಬ್ಬರ ಜೀವ ಬಲಿ ಪಡೆದ ಪುಂಡಾನೆ ಸೇರಿ ಐದು ಸಲಗಗಳನ್ನು ಹಿಡಿದು ಸ್ಥಳಾಂತರಿಸಬೇಕಿದೆ. ಅರ್ಜುನ ಆನೆ ಸಾವಿನ ನಂತರ ತಂಡ ಮಾನಸಿಕವಾಗಿ ಕುಗ್ಗಿದೆ. ಅಲ್ಲದೆ ಸೆರೆ ಹಿಡಿಯಬೇಕು ಎಂದುಕೊಂಡಿರುವ ಐದು ಸಲಗಗಳು ಬಲಿಷ್ಠವಾಗಿರುವುದರಿಂದ ಅವುಗಳನ್ನು ಸಕ್ರೆಬೈಲು ಶಿಬಿರದ ಸಾಕಾನೆಗಳ ಸಹಾಯದಿಂದ ಹಿಡಿಯುವುದು ಕಷ್ಟ. ಆದ್ದರಿಂದ ಅಭಿಮನ್ಯು ರೀತಿಯ ಬಲಿಷ್ಠ ಆನೆಯ ತಂಡ ಬೇಕು ಎಂದು ಇಲಾಖೆ ಅಧಿಕಾರಿಗಳು ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಎಲ್ಲರೀತಿಯ ಸಿದ್ಧತೆ ಪೂರ್ಣಗೊಂಡು ತಂಡ ಪರಿಪಕ್ವವಾದ ಬಳಿಕವೇ ಕಾರ್ಯಾಚರಣೆ ಆರಂಭಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…