ಚಿಕ್ಕಮಗಳೂರು: ಮತದಾನ ಮುಗಿದ ಬಳಿಕ ಇವಿಎಂ ಹಾಗೂ ವಿವಿ ಪ್ಯಾಟ್ ಯಂತ್ರಗಳನ್ನು ಅಧಿಕಾರಿಗಳು ಮತಗಟ್ಟೆಯಲ್ಲೇ ಬಿಟ್ಟು ಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ನಗರದ ಪೆನ್ಷನ್ ಮೊಹಲ್ಲದ ಕಾಲೇಜಿನ ಮತಗಟ್ಟೆ ಸಂಖ್ಯೆ ೧೬೮ ಹಾಗೂ ೧೬೯ ರಲ್ಲಿ ಇರಿಸಲಾಗಿದ್ದ ಒಂದು ಇವಿಎಂ ಮಾತ್ರ ತೆಗೆದುಕೊಂಡು ಹೋಗಿದ್ದರು. ಬಳಿಕ ರಾಜಕೀಯ ಪಕ್ಷಗಳ ಏಜೆಂಟರ (Election Agents) ಕಣ್ಣಿಗೆ ಯಂತ್ರಗಳು ಕಾಣಿಸಿವೆ.
ಅಧಿಕಾರಿಗಳನ್ನು ವಾಪಸ್ ಕರೆಸಿ ಪೊಲೀಸ್ ಭದ್ರತೆಯಲ್ಲಿ ಮತಯಂತ್ರವನ್ನು ಸಾಗಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪೆನ್ಷನ್ ಮೊಹಲ್ಲಾ ಬೂತ್ ನಲ್ಲಿ ೭೦೦ ಮತಗಳಿವೆ. ಮತ ಎಣಿಕೆಯ ದಿನ ಲೆಕ್ಕ ಸರಿಯಾಗಿ ಇರಬೇಕೆಂದು ತಾಕೀತು ಮಾಡಿದ್ದಾರೆ.
ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…
ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…
ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…