News Karnataka Kannada
Monday, April 29 2024
ಚಿಕಮಗಳೂರು

ಮಾ.3ರಂದು ಜಿಲ್ಲೆಯಲ್ಲಿ ಐದು ಗ್ಯಾರಂಟಿ ಸಮಾವೇಶ

ಜಿಲ್ಲಾಡಳಿತದ ವತಿಯಿಂದ ಮಾ.೩ರಂದು ಐದು ಗ್ಯಾರೆಂಟಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟ ದರ್ಜೆ ಸಚಿವರು ಭಾಗವಹಿಸುವರು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.
Photo Credit : News Kannada

ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ಮಾ.೩ರಂದು ಐದು ಗ್ಯಾರೆಂಟಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟ ದರ್ಜೆ ಸಚಿವರು ಭಾಗವಹಿಸುವರು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರದ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ವೇದಿಕೆ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗುತ್ತಿದೆ ಎಂದು ಹೇಳಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಇತರೆ ಸಚಿವರು ಪಾಲ್ಗೊಳ್ಳುವರು. ಜಿಲ್ಲೆಯ ಐದು ಜನ ಶಾಸಕರು ಭಾಗವಹಿಸುವರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿಗಳು ಮಧ್ಯಾಹ್ನ ೧ಗಂಟೆಗೆ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಸಮಾವೇಶದ ಜತೆಗೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸುವರು ಎಂದು ಮಾಹಿತಿ ನೀಡಿದರು.

ಇದೇ ವೇಳೆ ಜಿಲ್ಲೆಯ ಐದು ಜನ ಶಾಸಕರು ಚಿಕ್ಕಮಗಳೂರು ಜಿಲ್ಲೆ ಅಭಿವೃದ್ದಿಗೆ ಸೇರಿದಂತೆ ವಿಚಾರಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದ ಅವರು, ಸಮಾವೇಶದಲ್ಲಿ ಜಿಲ್ಲಾದ್ಯಂತ ಅಂದಾಜು ೧೫ಸಾವಿರಕ್ಕೂ ಹೆಚ್ಚಿನ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜನರನ್ನು ಕರೆತರುವ ನಿಟ್ಟಿನಲ್ಲಿ ೩೦೦ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದ ಅವರು, ಕೆಲ ಆಯ್ದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳು ಮುಖ್ಯಮಂತ್ರಿಗಳ ಮುಂದೇ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಜಿ.ಪಂ. ಮುಖ್ಯಕಾರ್ಯನಿರ್ವಹ ಣಾಧಿಕಾರಿ ಡಾ|ಬಿ.ಗೋಪಾಲಕೃಷ್ಣ ಮಾತನಾಡಿ, ಗ್ಯಾರೆಂಟಿ ಯೋಜನೆಗಳ ಸಮಾವೇಶ ಮಾ.೩ರ ಮಧ್ಯಾಹ್ನ ೧ ರಿಂದ ೩ ಗಂಟೆಯವರೆಗೂ ನಡೆಯಲಿದೆ. ಸಮಾವೇಶದ ಜತೆಗೆ ಜಿಲ್ಲೆಯಲ್ಲಿನ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಯಲಿದೆ. ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ ಎಂದು ಹೇಳಿದರು.

ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಶನಿವಾರ ವೇದಿಕೆ ನಿರ್ಮಾಣ ಪೂರ್ಣ ಗೊಳ್ಳಲಿದೆ. ತಾಲೂಕು ಕೇಂದ್ರಗಳಿಂದ ಜನರನ್ನು ಕರೆತರಲು ಜಿಲ್ಲಾಡಳಿತದಿಂದ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದ ಅವರು, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಯೋಜನೆಯ (ಜಲ ಜೀವನ್ ಮಿಷನ್) ೪೭೫ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.

ಸಣ್ಣ ನೀರಾವರಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಮೇಸ್ಕಾಂ, ಆಯುಷ್, ಆರೋಗ್ಯ ಇಲಾಖೆ, ಪಶುಸಂಗೋಪಾನೆ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಾಭಿವೃದ್ದಿ ಇಲಾಖೆ ಜತೆಗೆ ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಎರಡು ಇಂದಿರಾ ಕ್ಯಾಟೀನ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು