News Karnataka Kannada
Sunday, April 28 2024
ಪ್ರವಾಸ

ಪ್ರವಾಸಿಗರಿಗೆ ಸಿಹಿಸುದ್ದಿ: ವೀಕ್ಷಣೆಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ

ckb
Photo Credit : News Kannada

ಚಿಕ್ಕಮಗಳೂರು: ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದ್ದ ಮಳೆಯಿಂದಾಗಿ ಚಿಕ್ಕಮಗಳೂರಿನ ವಿವಿಧ ಜಲಪಾತ ಹಾಗೂ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ನಿರ್ಬಂಧವನ್ನು ವಿಧಿಸಿದ ಚಿಕ್ಕಮಗಳೂರು ಜಿಲ್ಲಾಡಳಿತವು ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಿದೆ.

ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶದ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತವು ವಾರಾಂತ್ಯದ ದಿನಗಳಾದ ಶುಕ್ರವಾರದಿಂದ ಸೋಮವಾರದವರೆಗೆ ಮೂರು ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಈಗ ಮುಳ್ಳಯ್ಯನಗಿರಿ ಸಾಲಿನಲ್ಲಿ ಗುಡ್ಡ ಕುಸಿತದ ಹಿನ್ನೆಲೆಯಲ್ಲಿಯೂ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಆದರೆ, ಗುಡ್ಡ ಕುಸಿತದ ಭಾಗವನ್ನು ತೆರವು ಮಾಡಲಾಗಿದ್ದು, ಮಳೆಯೂ ತಗ್ಗಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ ಪ್ರವಾಸಿಗರ ವೀಕ್ಷಣೆಗೆ ಅನುಮತಿ ನೀಡಲಾಗಿದೆ.

ಆದರೆ, ಜಲಪಾತ ಸೇರಿದಂತೆ ಗಿರಿ ಪ್ರದೇಶಗಳಲ್ಲಿ ಪ್ರವಾಸಿಗರು ರೀಲ್ಸ್‌ ಮಾಡುವುದು ಹಾಗೂ ಸಾಹಸ ಪ್ರದರ್ಶನ ಮಾಡಲು ಹೋಗಿ ಜೀವಕ್ಕೆ ಅಪಾಯ ತಂದುಕೊಳ್ಳಬಾರದು ಎಂದು ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು