ಚಿಕ್ಕಮಗಳೂರು: ಕುದುರೆ ಮುಖ ಸಮೀಪದ ಕಳಸದಲ್ಲಿ ‘ಕೊರಗಜ್ಜ’ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಗೂಂಡಾಗಳು ದಾಳಿ ಮಾಡಿದ್ದಾರೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಆಗಿದೆ. ಬಾಲಿವುಡ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ, ನಟಿ ಶುಭಾ ಪೂಂಜ ಮೊದಲಾದವರು ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಆದರೆ ಸಿನಿಮಾ ಸೆಟ್ ನಾಶವಾಗಿದೆ.
ದೈವ ಆರಾಧನೆ ಮಾಡುವ ಸಮುದಾಯದಿಂದ ಈ ರೀತಿ ತೊಂದರೆ ಆಗಿದೆ ಎಂದು ನಿರ್ದೇಶಕ ಸುಧೀರ್ ಅವರು ಹೇಳಿದ್ದಾರೆ. ‘ಅಕ್ಟೋಬರ್ 27ರಂದು ಶೂಟ್ ನಡೆಯುತ್ತಿತ್ತು. ಬೆಳಿಗ್ಗೆ ಶೂಟ್ ಮಾಡಿದೆವು. ಮಧ್ಯಾಹ್ನ ಊಟದ ನಂತರ ಕೆಲವರು ತಲ್ವಾರ್ ಹಿಡಿದು ಸೆಟ್ಗೆ ಬಂದರು. ಅವರು ಆವೇಶದಲ್ಲಿ ಇದ್ದರು. ನಂತರ ಮತ್ತೊಂದು ತಂಡದವರು ಸೆಟ್ನ ಪರಿಶೀಲಿಸಿದ್ದಾರೆ. ಆ ಬಳಿಕ ಮೂರನೆ ತಂಡ ಕೂಡ ಬಂತು. ಅಲ್ಲಿ ಬಿಜೆಪಿ ನಾಯಕರಿದ್ದರು’ ಎಂದು ಸುಧೀರ್ ಮಾಹಿತಿ ನೀಡಿದ್ದಾರೆ.