ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿರುವ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆ ನಡೆಸುತ್ತಿದ್ದಾರೆ. ಹುಣ್ಣಿಮೆ ಪೂಜೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಇನ್ನು ಹುಣ್ಣಿಮೆ ಪೂಜೆಯಂದು ದತ್ತ ಪಾದುಕೆ ದರ್ಶನ, ಪೂಜೆ ಸಲ್ಲಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಪ್ರತಿ ಹುಣ್ಣುಮೆ ದಿನ ಭಜರಂಗದಳ, ವಿಹೆಚ್ಪಿ ಕಾರ್ಯಕರ್ತರು ದತ್ತ ಪಾದುಕೆಗೆ ಪೂಜೆ ಸಲ್ಲಿಸುತ್ತಿದ್ದರು. ಈಗ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆ ನೆರವೇರಿಸಲಿದ್ದಾರೆ.
ಬೈಕ್ ಜಾಥಾದ ಮೂಲಕ ಕಾರ್ಯಕರ್ತರು, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಲಿದ್ದಾರೆ. ಡಿಸೆಂಬರ್ 17 ರಿಂದ ದತ್ತಜಯಂತಿ ಆರಂಭವಾಗಲಿದೆ.