News Karnataka Kannada
Monday, April 29 2024
ಚಿಕಮಗಳೂರು

ಸಂಸ್ಕೃತ ಕಲಿಯಲು ಹಿರೇಮಗಳೂರಿಗೆ ಬಂದ ಇಸ್ರೇಲ್ ವಿದ್ಯಾರ್ಥಿಗಳು

Israeli students come to Hiremagalur to learn Sanskrit
Photo Credit : News Kannada

ಚಿಕ್ಕಮಗಳೂರು : ಇಸ್ರೇಲ್‌ನಲ್ಲಿ ಸಂಸ್ಕೃತ ದಲ್ಲೇ ಪಿಎಚ್ ಡಿ ಪಡೆದಿರುವ ಉಪನ್ಯಾಸಕ ರಫಿ ತಮ್ಮ ೯ ವಿದ್ಯಾರ್ಥಿಗಳೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ. ಅದರಲ್ಲೂ ರಾಜ್ಯದ ಚಿಕ್ಕಮಗಳೂರಿನ ಹಿರೇಮಗಳೂರಿನಲ್ಲಿರುವ ಕೋದಂಡ ರಾಮ ಸ್ವಾಮಿ ದೇವಾಲಯದಲ್ಲಿ ಸಂಸ್ಕೃತ ಕಲಿಕೆ ಮಾಡಿದ್ದಾರೆ.

ಈ ೯ಮಂದಿ ವಿದ್ಯಾರ್ಥಿಗಳು ಇಸ್ರೇಲ್ ನಲ್ಲಿ ೨ನೇ ವರ್ಷದ ಬಿ.ಎ ಪದವಿ, ಮೊದಲನೇ ವರ್ಷದ ಎಂ.ಎ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಪನ್ಯಾಸಕ ರಫಿ,ತನ್ನ ವಿದ್ಯಾರ್ಥಿಗಳಿಗೆ ಭಾರತದ ಸಂಸ್ಕೃತ, ಭಾಷೆ, ಆಚಾರ-ವಿಚಾರ ತಿಳಿಯಲು ವಿದ್ಯಾರ್ಥಿಗಳೊಂದಿಗೆ ಆಗಮಿಸಿದ್ದಾರೆ.

ಭಾರತೀಯ ಜನರೇ ಭಾರತೀಯ ಸನಾತನ ಸಂಸ್ಕೃತಿಯನ್ನು ವಿರೋಧಿಸುತ್ತಿರುವ ಇಂಥ ದಿನದಲ್ಲಿ, ದಿನದಿಂದ ದಿನಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿಯ ದಾಸರಾಗಿ ನಾವು-ನಮ್ಮದೆಂಬುದರ ಅರಿವಿಲ್ಲದೆ ಬದುಕುತ್ತಿರುವ ಭಾರತೀಯ ಜನರುಗಳು. ಇಲ್ಲಿಗೆ ಸಂಸ್ಕೃತ ಕಲಿಯಲು ಬಂದಿರುವ ಈ ವಿದ್ಯಾರ್ಥಿಗಳನ್ನು ನೋಡಿ ಕಲಿಯುವುದು ಸಾಕಷ್ಟಿದೆ. ಇಸ್ರೇಲ್ ವಿದ್ಯಾರ್ಥಿಗಳು ಸದ್ಯ ಸಂಸ್ಕೃತದಲ್ಲೇ ಮಾತನಾಡುವಷ್ಟು ಸಮರ್ಥರಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ನಮ್ಮ ಭಾಷೆ ಗೊತ್ತಿಲ್ಲ, ಕರ್ನಾಟಕದಲ್ಲಿ ಸ್ನೇಹಿತರು-ಸಂಬಂಧಿಕರು ಇಲ್ಲ. ಇಲ್ಲಿನ ಊಟ-ತಿಂಡಿಯ ಅರಿವಿಲ್ಲ. ಆದರೂ ಹಿರೇಮಗಳೂರಿನಲ್ಲಿ ಉಳಿದುಕೊಂಡು ಸಂಸ್ಕೃತ ಕಲಿಯುತ್ತಿರುವ ಇವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು