ಚಿಕ್ಕಮಗಳೂರು : ಇಸ್ರೇಲ್ನಲ್ಲಿ ಸಂಸ್ಕೃತ ದಲ್ಲೇ ಪಿಎಚ್ ಡಿ ಪಡೆದಿರುವ ಉಪನ್ಯಾಸಕ ರಫಿ ತಮ್ಮ ೯ ವಿದ್ಯಾರ್ಥಿಗಳೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ. ಅದರಲ್ಲೂ ರಾಜ್ಯದ ಚಿಕ್ಕಮಗಳೂರಿನ ಹಿರೇಮಗಳೂರಿನಲ್ಲಿರುವ ಕೋದಂಡ ರಾಮ ಸ್ವಾಮಿ ದೇವಾಲಯದಲ್ಲಿ ಸಂಸ್ಕೃತ ಕಲಿಕೆ ಮಾಡಿದ್ದಾರೆ.
ಈ ೯ಮಂದಿ ವಿದ್ಯಾರ್ಥಿಗಳು ಇಸ್ರೇಲ್ ನಲ್ಲಿ ೨ನೇ ವರ್ಷದ ಬಿ.ಎ ಪದವಿ, ಮೊದಲನೇ ವರ್ಷದ ಎಂ.ಎ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಪನ್ಯಾಸಕ ರಫಿ,ತನ್ನ ವಿದ್ಯಾರ್ಥಿಗಳಿಗೆ ಭಾರತದ ಸಂಸ್ಕೃತ, ಭಾಷೆ, ಆಚಾರ-ವಿಚಾರ ತಿಳಿಯಲು ವಿದ್ಯಾರ್ಥಿಗಳೊಂದಿಗೆ ಆಗಮಿಸಿದ್ದಾರೆ.
ಭಾರತೀಯ ಜನರೇ ಭಾರತೀಯ ಸನಾತನ ಸಂಸ್ಕೃತಿಯನ್ನು ವಿರೋಧಿಸುತ್ತಿರುವ ಇಂಥ ದಿನದಲ್ಲಿ, ದಿನದಿಂದ ದಿನಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿಯ ದಾಸರಾಗಿ ನಾವು-ನಮ್ಮದೆಂಬುದರ ಅರಿವಿಲ್ಲದೆ ಬದುಕುತ್ತಿರುವ ಭಾರತೀಯ ಜನರುಗಳು. ಇಲ್ಲಿಗೆ ಸಂಸ್ಕೃತ ಕಲಿಯಲು ಬಂದಿರುವ ಈ ವಿದ್ಯಾರ್ಥಿಗಳನ್ನು ನೋಡಿ ಕಲಿಯುವುದು ಸಾಕಷ್ಟಿದೆ. ಇಸ್ರೇಲ್ ವಿದ್ಯಾರ್ಥಿಗಳು ಸದ್ಯ ಸಂಸ್ಕೃತದಲ್ಲೇ ಮಾತನಾಡುವಷ್ಟು ಸಮರ್ಥರಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ನಮ್ಮ ಭಾಷೆ ಗೊತ್ತಿಲ್ಲ, ಕರ್ನಾಟಕದಲ್ಲಿ ಸ್ನೇಹಿತರು-ಸಂಬಂಧಿಕರು ಇಲ್ಲ. ಇಲ್ಲಿನ ಊಟ-ತಿಂಡಿಯ ಅರಿವಿಲ್ಲ. ಆದರೂ ಹಿರೇಮಗಳೂರಿನಲ್ಲಿ ಉಳಿದುಕೊಂಡು ಸಂಸ್ಕೃತ ಕಲಿಯುತ್ತಿರುವ ಇವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.