ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಹೊರಟಿರುವ ಜೆಡಿಎಸ್- ಸಿ.ಟಿ.ರವಿ ವ್ಯಂಗ್ಯ

ಮೂಡಿಗೆರೆ: ಬೇರೆ ಪಕ್ಷದಿಂದ ಹಾರಿದವರನ್ನು ತಮ್ಮ ಪಕ್ಷಕ್ಕೆ ಸೇರಿಸಿ ಕೊಂಡು ಟಕೇಟ್ ನೀಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಹೊರಟಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದರು.

ಅವರು ಪಟ್ಟಣದ ಅಡ್ಯಂತಾಯ ರಂಗಮಂದಿರಲ್ಲಿ ಏರ್ಪಡಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪರ ಮತ ಯಾಚಿಸಿ ಮಾತನಾಡಿದರು. ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವನಾಥ್ ಹಳ್ಳಿಹಕ್ಕಿ ಅವರನ್ನು ಜೆಡಿಎಸ್‌ಗೆ ಕರೆತಂದು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದರು. ಆದರೆ ಅವರು ಕೆಲವೇ ದಿನದಲ್ಲಿ ಬುದ್ದಿ ತೋರಿ ಸಿದ್ದು ಮರೆತಿದ್ದಾರೆ. ಅದೇ ರೀತಿಯಲ್ಲಿ ಎಂ.ಪಿ.ಕುಮಾರಸ್ವಾಮಿ ಕೂಡ ಕೆಲವೇ ದಿನದಲ್ಲಿ ತಮ್ಮ ಬುದ್ದಿ ತೋರಿಸಲಿದ್ದಾರೆ.

ಎಂಪಿಕೆ ಅವರು ಧರ್ಮಸ್ಥಳದಲ್ಲಿ ತಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ವೆಂದು ಪ್ರಮಾಣ ಮಾಡಿದ್ದರೂ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ. ದೇವರಿಗೆ ದೋಖಾ ಮಾಡಿದ ಅವರು, ಇನ್ನು ಜೆಡಿಎಸ್‌ಗೆ ದೋಖಾ ಮಾಡದೇ ಇರುವರೇ? ಬಿಜೆಪಿ ಅವರಿಗೆ ನೀಡಿದ ಸ್ಥಾನ, ಮಾನದ ಋಣ ತೀರಿಸಲು ೩ ಜನ್ಮ ಎತ್ತಿದರೂ ಸಾಧ್ಯವಿಲ್ಲ. ಎಂಪಿಕೆಯ ಕಳ್ಳಾಟ ಜನರಿಗೆ ಗೊತ್ತಿದೆ. ಇಲ್ಲೂ ಕೂಡ ಒಂದು ಭಾರತೀಯ ರಿಜರ್ವ್ ಬ್ಯಾಂಕ್ ಇತ್ತು ಎಂದು ಪರೋಕ್ಷವಾಗಿ ಟೀಕೆ ಮಾಡಿದ ಅವರು, ಜಾತಿ ಗೆಲ್ಲಬಾರದು. ಹಿಂದುತ್ವ, ರಾಷ್ಟ್ರ ಉಳಿಯಬೇಕೆಂದರೆ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಎಂ.ಪಿ.ಕುಮಾರಸ್ವಾಮಿ ಅವರ ಪಕ್ಷ ವಿರೋಧಿ ಚಟುವಟಿಕೆ, ಕಾರ್ಯಕರ್ತರ ಕಡೆಗಣನೆಯಿಂದಾಗಿ ಕೇಂದ್ರ ನಡೆಸಿದ ಚುನಾವಣೆ ಸಮೀಕ್ಷೆ ಯಿಂದ ಅವರಿಗೆ ಟಿಕೇಟ್ ಕೈ ತಪ್ಪಿದೆ ಹೊರತು ಯಾವ ಕೈವಾಡವೂ ಇಲ್ಲ. ಎಂಪಿಕೆ ಅನುಕಂಪ ಗಿಟ್ಟಿಸಿಕೊಳ್ಳಲು ತಾನೊಬ್ಬ ದಲಿತವೆಂಬ ಕಾರಣಕ್ಕೆ ಸವಾರಿ ಮಾಡುತ್ತಿದ್ದಾರೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಇಲ್ಲಿ ದಲಿತರು ಬಿಟ್ಟರೆ ಬೇರೆ ಯಾರಿಗಾದರೂ ಟಿಕೇಟ್ ನೀಡಲು ಸಾಧ್ಯವಿಲ್ಲವೆಂಬದು ಎಲ್ಲರಿಗೂ ತಿಳಿದಿದೆ.

ಬಣಕಲ್ ಕ್ಷೇತ್ರದಲ್ಲಿ ಶಾಮಣ್ಣ ಜಿ.ಪಂ. ಚುನಾವಣೆಗೆ ನಿಂತಾಗ ಅವರನ್ನು ಸೋಲಿಸಲು ಪ್ರಯತ್ನಿಸಿದರು. ಜಿ.ಪಂ. ಚುನಾವಣೆಗೆ ವಕೀಲ ಸಿದ್ದಯ್ಯ ಹಾಗೂ ದೀಪಕ್ ದೊಡ್ಡಯ್ಯ ನಿಂತಾಗ ಅವರೆಲ್ಲಿ ಬೆಳೆದುಬಿಡುತ್ತಾರೋ ಎಂಬ ಕಾರಣಕ್ಕೆ ಎಂಪಿಕೆ ಅವರನ್ನು ಸೋಲಿಸಲು ಕಾರಣರಾಗಿದ್ದರು.

ಹಾಗಾದರೆ ದಲಿತ ವಿರೋಧಿ ಎಂದು ಯಾರನ್ನು ಕರೆಯಬೇಕು? ಎಂಪಿಕೆ ಅವರು ಕಾರ್ಯಕರ್ತರ ಶಕ್ತಿ ತಿಳಿಯದೇ ಎಲ್ಲಾ ಚುನಾವಣೆ ತನ್ನಿಂದಲೇ ಗೆದ್ದಿರುವುದೆಂದು ಮೂರ್ಖರಂತೆ ಮಾತನಾಡುತ್ತಿದ್ದಾರೆ. ಅವರನ್ನು ಹೆಗಲ ಮೇಲೆ ಕೂರಿಸಿದ್ದರಿಂದ ಇಷ್ಟೆಲ್ಲಾ ಆವಾಂತರಕ್ಕೆ ಕಾರಣವಾಗಿದೆ. ಈಗ ಕೆಳಗಿಳಿಸಿದ್ದೇವೆ. ಇನ್ನು ಸರಿ ಸಮಾನವಾಗಿ ನಿಲ್ಲಲೂ ಅವರಿಂದ ಸಾಧ್ಯವಿಲ್ಲ ಎಂದು ಹೇಳಿದರು.

ಅಭ್ಯರ್ಥಿ ದೀಪಕ್ ದೊಡ್ಡಯ್ಯ ಮಾತನಾಡಿ, ತಾನು ಗೆದ್ದರೆ ಶಾಸಕನಾಗಿ ಕೆಲಸ ಮಾಡುವುದಿಲ್ಲ. ನಿಮ್ಮ ಸೇವಕನಾಗಿ ಕೆಲಸ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರು, ನಾಯಕರು, ಕ್ಷೇತ್ರದ ಜನತೆಗೆ ನೋವಾಗದಂತೆ ೨೪ ಗಂಟೆ ಸೇವೆ ಮಾಡುತ್ತೇನೆ. ಇದಕ್ಕೆ ಒಂದು ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಇದಕ್ಕೂ ಮುನ್ನ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಬಿಜೆಪಿ ಕಚೇರಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಉದ್ಘಾಟಿಸಿದರು. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಬಳಿಕ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಚುನಾವಣಾಧಿಕಾರಿ ಕಚೇರಿಗೆ ತೆರಳಿ ೨ ನೇ ನಾಮಪತ್ರ ಸಲ್ಲಿಸಿದರು. ತದ ನಂತರ ಸಾವಿರಾರು ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶಿಸಿದರು.

ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಮಿಥಿಲೇಶ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಲೂಕು ಅಧ್ಯಕ್ಷ ಜೆ.ಎಸ್.ರಘು, ಮುಖಂಡರಾದ ಹಳಸೆ ಶಿವಣ್ಣ, ಕೆಂಜಿಗೆ ಕೇಶವ್, ಶೇಷಗಿರಿ ಕಳಸ, ದಿನೇಶ್ ಆಲ್ದೂರು, ದೇವರಾಜುಶೆಟ್ಟಿ, ಪ್ರೇಮ್‌ಕುಮಾರ್, ಬಿ.ಎನ್.ಜಯಂತ್ ಮತ್ತಿತರರಿದ್ದರು.

Sneha Gowda

Recent Posts

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

34 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

39 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

51 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

54 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

1 hour ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

1 hour ago