ಬೀರೂರು : ಹೊಸ ಮುಖ ಎಚ್.ಡಿ.ತಮ್ಮಯ್ಯ ಅವರಿಗೆ ಟಿಕೆಟ್ ಘೋಷಿಸಿರು ವುದನ್ನು ಖಂಡಿಸಿ ಜಿಲಾ ಕಾಂಗ್ರೆಸ್ ಉಪಾಧ್ಯಕ್ಷ ಹುದ್ದೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವ ತೊರೆಯುವುದಾಗಿ ಬೀರೂರು ಕೆ.ಎಂ.ವಿನಾಯಕ ತಿಳಿಸಿದರು.
ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಕಡೂರು ಮತ್ತು ತರೀಕೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆಕುರಿತು ಸಾಮಾಜಿಕ ನ್ಯಾಯದ ಅಡಿ ತರೀಕೆರೆಯಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡಿದರೆ ಕಡೂರಿನಲ್ಲಿ ಕುರುಬರಿಗೆ, ಕಡೂರಿನಲ್ಲಿ ಲಿಂಗಾಯತರಿಗೆ ನೀಡಿದರೆ ತರೀಕೆರೆಯಲ್ಲಿ ಕುರುಬರಿಗೆ ಎಂದು ಪಾಲಿಸಿಕೊಂಡು ಬಂದ ನೀತಿಯನ್ನು ಬದಿಗೊತ್ತಿ ಎರಡೂ ಕ್ಷೇತ್ರಗಳಲ್ಲಿ ಕುರುಬ ಸಮುದಾಯಕ್ಕೆ ಮಣೆ ಹಾಕಲಾಗಿದೆ.
ಚಿಕ್ಕಮಗಳೂರಿನಲ್ಲಿ ಆಕಾಂಕ್ಷಿಗಳಾಗಿದ್ದ ಏಳೂ ಮಂದಿಯನ್ನು ಕಡೆಗಣಿಸಿ ಲಿಂಗಾಯತ ಎಂಬ ಕಾರಣಕ್ಕೆ ತಮ್ಮಯ್ಯ ಅವರಿಗೆ ಟಿಕೆಟ್ ಘೋಷಿಸಿರುವುದು ಪಕ್ಷ ನಿಷ್ಠರಿಗೆ ಅಸಮಾಧಾನಉಂಟು ಮಾಡಿರುವ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
ಕಡೂರು ವಿಧಾನಸಭಾಕ್ಷೇತ್ರದಲ್ಲಿ ಕಳೆದ ೨೦ವರ್ಷಗಳಿಗಿಂತಲೂ ಅಧಿಕ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಾ ಬರುತ್ತಿದ್ದೇನೆ.
ಕಳೆದ ಬಾರಿಯು ನಾನು ವಿಧಾನಸಭಾ ಚುನಾವಣೆಗೆ ನಿಲ್ಲಲು ಹರಸಾಹಸ ಪಟ್ಟರು ವರಿಷ್ಠರು ಟಿಕೇಟ್ ನೀಡಿರಲಿಲ್ಲ, ಈ ಬಾರಿಯಾದರೂ ನೀಡುತ್ತಾರೆಂಬ ನಿರೀಕ್ಷೆ ಇತ್ತು ಆದರೆ ಅದುಕೂಡ ಹುಸಿಯಾಯಿತು. ಪಕ್ಷ ನಿಷ್ಠೆ ಮಾಡುವವರಿಗೆ ಪಕ್ಷದಲ್ಲಿ ಬೆಲೆ ಇಲ್ಲ ಎಂದು ತಮ್ಮ ನಿಲುವಿನ ಬಗ್ಗೆ ಪ್ರಸ್ತಾಪಿಸಿದ ಅವರು. ನಿಮ್ಮ ರಾಜಕೀಯ ನಡೆಯ ಬಗ್ಗೆ ಪ್ರಶ್ನಿಸಿದಾಗ, ಈಗಾಗಲೇ ಕೆಲವು ಪಕ್ಷದ ನಾಯಕರು ಭೇಟಿ ಮಾಡಿ ಪಕ್ಷ ಸೇರುವಂತೆ ಮನವಿ ಮಾಡಿದ್ದಾರೆ. ನಾನು ಒಪ್ಪಿಲ್ಲ, ನನ್ನ ಅಭಿಮಾನಿಗಳು ಮತ್ತು ಕಾರ್ಯಕರ್ತರ ಸಭೆ ಕರೆದು ಬಳಿಕ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.
ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾದ ಮೊದಲ ಬ್ಯಾಚ್…
ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್ರಿಂದ…
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…