News Karnataka Kannada
Monday, May 13 2024
ಚಿಕಮಗಳೂರು

ಚುನಾವಣೆಯಲ್ಲಿ ಗೆಲ್ಲೋದ್ಯಾರು? ಕಾರ್ಣಿಕ ನುಡಿದ ಮೈಲಾರಲಿಂಗೇಶ್ವರ ಸ್ವಾಮಿ

ಲೋಕಸಭೆಗೆ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ರಾಜಕೀಯಪಕ್ಷಗಳು ಈ ಬಾರಿ ನಾವೇ ಗೆಲ್ಲುತ್ತೇವೆ ನಮ್ಮದೇ ಅಧಿ ಕಾರ ಎಂದು ಹೇಳಿ ಕೊಂಡು ಬರುತ್ತಿವೆ.
Photo Credit : News Kannada

ಚಿಕ್ಕಮಗಳೂರು : ಲೋಕಸಭೆಗೆ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ರಾಜಕೀಯಪಕ್ಷಗಳು ಈ ಬಾರಿ ನಾವೇ ಗೆಲ್ಲುತ್ತೇವೆ ನಮ್ಮದೇ ಅಧಿಕಾರ ಎಂದು ಹೇಳಿ ಕೊಂಡು ಬರುತ್ತಿವೆ.

ರಾಜಕೀಯ ಪಕ್ಷದ ಮುಖಂಡರು ಈಗಾಗಲೇ ಕಸರತ್ತು ಮಾಡಿ ಕೊಂಡು ಜನರು ಬಳಿ ಹೋಗುತ್ತಿದ್ದಾರೆ. ಇದರ ನಡುವೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಭವಿಷ್ಯ ಬಿಜೆಪಿ ಪಾಲಿಗೆ ಸಿಹಿ ನೀಡಿದೆ.  ಈ ಬಾರಿ ಕೇಂದ್ರದಲ್ಲಿ ಯಾರು ಅಧಿಕಾರಕ್ಕೆ ಬರುತ್ತಾರೆ ಎಂದು ಮೈಲಾರಲಿಂಗ ಕಾರ್ಣಿಕ ಭವಿಷ್ಯ ನುಡಿದಿದ್ದು,ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,  ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಭವಿಷ್ಯ ನುಡಿದಿದೆ.

ಈ ಬಾರಿಯೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಕಾರ್ಣಿಕ ಭವಿಷ್ಯ ನುಡಿದಿದ್ದು, ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್ ಎಂದು ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರ ಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದೆ.
ಈ ವರ್ಷ ಮಳೆ ಬೆಳೆ ಸಮೃದ್ಧವಾಗಿ ಆಗುತ್ತದೆ. ಮತ್ತೆ ಕಮಲ ಪಕ್ಷ ಅರಳುವುದು ಕಾರ್ಣಿಕ ನುಡಿ ಕೇಳಿ ಬಂದಿದ್ದು, ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ಭವಿಷ್ಯ ನುಡಿದಿದೆ.

ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ವಾಷಿಕೋತ್ಸವದಲ್ಲಿ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ ಮಂಜುನಾಥ್ ದೇವಸ್ಥಾನದ ಆವರಣದಲ್ಲಿ ಹುಟ್ಟಿದ ಕಮಲ ಆಕಾಶ ಮೆಟ್ಟಿತು.  ಮಳೆ ಬೆಳೆ ಸಸಿಯಿತಲೇ ಪರಾಕ್’ ಎಂದು ಕಾರ್ಣಿಕ ನುಡಿದಾಗ ಜನರು ಹರ್ಷೋದ್ರೋರ ಮಾಡಿದರು. ಮುಂದಿನ ವರ್ಷ ಮಳೆ ಬೆಳೆ ಸಮೃದ್ಧ ವಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಮಲ ಮತ್ತೆ ಅರಳುತ್ತದೆ ಎಂದು ಸ್ಥಳೀಯರು ಕಾರ್ಣಿಕ ನುಡಿಯನ್ನು ಅರ್ಥೈಸಿದರು. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಮುಂದಿನ ದಿನಗಳಲ್ಲಿ ಕಾರ್ಣಿಕ ಭವಿಷ್ಯ ಏನಾಗುತ್ತೆ ಎಂಬುದನ್ನು ಕಾದು ನೋಡಬೇಕಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು