ಮರುಬಳಕೆ ವಸ್ತುಗಳ ಸಂಗ್ರಹ ಮಳಿಗೆಗೆ ಶಾಸಕ ಹೆಚ್.ಡಿ. ತಮ್ಮಯ್ಯ ಚಾಲನೆ

ಚಿಕ್ಕಮಗಳೂರು: ಮನುಷ್ಯ ತನ್ನ ದೇಹವನ್ನು ಎಷ್ಟರ ಮಟ್ಟಿಗೆ ಶುಚಿತ್ವ ಹೊಂದುವನು ಅದೇ ರೀತಿಯಲ್ಲಿ ನಗರವನ್ನು ಶುಚಿತ್ವದಿಂದ ಕೂಡಿರುವ ದೃಷ್ಟಿಯಿಂದ ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದ ವಸ್ತುಗಳನ್ನು ಒಂದೆಡೆ ಶೇಖರಿಸಿ ಪುನಃ ಅವುಗಳನ್ನು ಮರುಬಳಕೆ ಮಾಡಲು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ನಗರದ ಎಂ.ಜಿ.ರಸ್ತೆಯ ನಗರಸಭಾ ಕಟ್ಟಡದಲ್ಲಿ ಪೌರಾಡಳಿತ ನಿರ್ದೇಶಲಯ ಬೆಂಗಳೂರು ಇವರ ನಿರ್ದೇಶದಂತೆ ನಗರದಲ್ಲಿ ನನ್ನ ಲೈಫ್, ನನ್ನ ಸ್ವಚ್ಚ ನಗರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರುಬಳಕೆ ವಸ್ತುಗಳ ಸಂಗ್ರಹಣೆಯ ನೂತನ ಮಳಿಗೆಯನ್ನು ಭಾನುವಾರ ಚಾಲನೆ ನೀಡಿ ಅವರು ಮಾತನಾ ಡುತ್ತಿದ್ದರು.

ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದುಕೊಂಡ ನಂತರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಗರ ಸ್ವಚ್ಚತೆ ಕುರಿತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರಸಭಾಗೂ ತಮಗೂ ಹಿಂದಿನಿಂದಲೂ ಅನೇಕ ವರ್ಷಗಳ ಅವಿಭಾವ ಸಂಬಂಧವಿದೆ. ನಗರ ಸ್ವಚ್ಚತೆ ಕುರಿತು ಕಳೆದ ಕೆಳ ತಿಂಗಳಿನಿಂದ ಕೆಲಸ ಪ್ರಾರಂಭವಾಗಿದ್ದು ಇದೀಗ ಅಧಿಕೃತವಾಗಿ ಪ್ರಾರಂಭಿಸಿ ಜನಸೇವೆಗೆ ನೀಡಲಾಗಿದೆ ಎಂದರು.

ನಗರದಲ್ಲಿ ಮರುಬಳಕೆಗೆ ವಸ್ತುಗಳನ್ನು ಶೇಖರಿಸಲು ಕೆಲವು ನಿಯಮಗಳನ್ನು ಅನುಸರಿಸುವ ನಿಟ್ಟಿನಲ್ಲಿ ಆಟಿಕೆ ವಸ್ತುಗಳು, ಬಟ್ಟೆ, ಹಳೆಯ ಜೀನ್ಸ್, ಸಮವಸ್ತ್ರ, ಸೀರೆಗಳು, ದಿನಪತ್ರಿಕೆ, ಹಳೆಯ ಪುಸ್ತಕಗಳು, ಪೆನ್, ಪ್ಲಾಸ್ಟಿಕ್ ಚೀಲ, ಬ್ಯಾಗ್‌ಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಾರ್ವಜನಿಕರು ನೇರವಾಗಿ ಮಳಿಗೆಗಳಿಗೆ ನೀಡಿದರೆ ಗೌರವಯುತ ವಾಗಿ ಸಣ್ಣಮಟ್ಟಿನ ಬಹುಮಾನಗಳನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು ಎಂದು ಹೇಳಿದರು.

ಚಿಕ್ಕಮಗಳೂರು ತಾಲ್ಲೂಕು ಪ್ರವಾಸಿಗರ ತಾಣವಾಗಿರುವ ಹಿನ್ನೆಲೆಯಲ್ಲಿ ಅತಿಹೆಚ್ಚು ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ನಗರದ ಐದು ಕಡೆಗಳಲ್ಲಿ ತ್ಯಾಜ್ಯ ಸಂಗ್ರಹಣೆ ಶೇಖರಿಸುವ ಮಳಿಗೆಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಯಾವುದೇ ಉಪಯೋಗಕ್ಕೆ ಬಾರದ ವಸ್ತುಗಳನ್ನು ಮಳಿಗೆಗಳಿಗೆ ನೀಡಿದರೆ ಉಪಯೋಗಕ್ಕೆ ಬರುವ ವಸ್ತುಗಳನ್ನು ಮರುಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ನಗರ ಸ್ವಚ್ಚತೆ ಕುರಿತು ೨೦೦೧ರಲ್ಲಿ ಕಾಂಗ್ರೆಸ್‌ನ ನಗರಸಭಾ ಅಧ್ಯಕ್ಷರಾಗಿದ್ದ ಎಲ್.ವಿ.ಬಸವರಾಜ್‌ರವರ ನೇತೃತ್ವ ದಲ್ಲಿ ಮನೆ ಮನೆ ಕಸ ಸಂಗ್ರಹಣೆ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಸ್ವಚ್ಚತೆ ಕುರಿತು ಕಾರ್ಯಕ್ರಮಕ್ಕೆ ಅತಿಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡು ಮನ್ನಣೆ ಗಳಿಸಿದೆ ಎಂದರು.

ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ ಸಾರ್ವಜನಿಕರು ಪ್ರತಿನಿತ್ಯ ಉಪಯೋಗಿಸುವ ಹಾಗೂ ಹಳೆಯ ವಸ್ತುಗಳನ್ನು ಮರುಬಳಕೆ ಮಾಡಲು ಸರ್ಕಾರವು ನಗರಸಭಾ ಮೂಲಕ ಕಾರ್ಯಕ್ರಮವನ್ನು ಚಾಲನೆ ನೀಡಲಾಗಿದೆ. ನಗರದ ಐದು ಕಡೆಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿ ಸಾರ್ವಜನಿಕರಿಂದ ಉಪಯೋಗಕ್ಕೆ ಬಾರದ ವಸ್ತುಗಳನ್ನು ಸಂಗ್ರಹ ಮಾಡಲು ಮಳಿಗೆಯನ್ನು ಶಾಸಕರು ಅಧಿಕೃತವಾಗಿ ಪ್ರಾರಂಭಿಸಿದ್ದಾರೆ ಎಂದರು.

ಚಿಕ್ಕಮಗಳೂರು ನಗರದ ಜನತೆಗೆ ನಗರವನ್ನು ಸುಂದರವಾಗಿಡುವ ನಿಟ್ಟಿನಲ್ಲಿ ಹಳೆಯ ವಸ್ತುಗಳನ್ನು ಬೀಸಾ ಡುವ ಬದಲು ಮಳಿಗೆಗಳಿಗೆ ನೇರವಾಗಿ ನೀಡಿದರೆ ನಗರವನ್ನು ಇನ್ನಷ್ಟು ಮಾಲಿನ್ಯಮುಕ್ತಗೊಳಿಸಲು ಮುಂದಾಗಬ ಹುದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭಾ ಪ್ರಬಾರಿ ಪೌರಾಯುಕ್ತೆ ಲತಾಮಣಿ, ಸದಸ್ಯರಾದ ಇಂದಿರಾ ಶಂಕರ್, ಶಾದಬ್ ಆಲಂ, ಲಕ್ಷ್ಮಣ್, ಪರಮೇಶ್, ರಾಮನಹಳ್ಳಿ ಲಕ್ಷ್ಮಣ್, ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ಈಶ್ವರ್, ಕಂದಾಯ ಅಧಿಕಾರಿ ರಮೇಶ್ ಬಾಬು, ರೆವಿನ್ಯೂ ಇನ್ಸ್‌ಪೆಕ್ಟರ್ ಶಿವಾನಂದ ಮತ್ತಿತರರು ಹಾಜರಿದ್ದರು.

Gayathri SG

Recent Posts

ಸರ್ಕಾರಿ ಆಸ್ಪತ್ರೆಯ ಕಾರಿಡಾರ್​ನಲ್ಲಿ ನರ್ಸ್ ವೊಬ್ಬರು ಸ್ಕೂಟಿಯಲ್ಲಿ ಓಡಾಟ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ  ಚಿಕಿತ್ಸೆ…

3 mins ago

ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ…

3 mins ago

ರೇವಣ್ಣ ಕಿಡ್ನಾಪ್ ಕೇಸ್​ : ಜಾಮೀನು ಅರ್ಜಿ ವಿಚಾರಣೆ ​ಮುಂದೂಡಿದ ಕೋರ್ಟ್​

ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ…

9 mins ago

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು  ಕಾಮಾಕ್ಯ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು…

21 mins ago

ಎಚ್ಚರ! ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು : ಐವರು ಅಸ್ವಸ್ಥ

ಚಿಕನ್‌ ಶವರ್ಮ ಎಂದರೆ ಕೆಲವರಿಗೆ ತುಂಬ ಪ್ರಿಯ ಇದರ ಅಡ್ಡ ಪರಿಣಾಮ ತಿಳಿದಿದ್ದರು ತಿನ್ನುವುದು ಕಡಿಮೆ ಮಾಡುವುದಿಲ್ಲ ಆದರೆ ಇದೇ…

23 mins ago

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

31 mins ago