ಚಿಕ್ಕಮಗಳೂರು: ದೇಶದ ಪ್ರಧಾನಿ ಮತ್ತೆ ಮೋದಿಯೋ ಅಥವಾ ರಾಹುಲ್ ಗಾಂಧಿಯೋ ಎಂಬುದು ಲೋಕಸಭಾ ಚುನಾವಣೆ ಘೋಷಣೆಯ ನಂತರ, ಚುನಾವಣೆ ನಡೆದ ನಂತರ ನಿರ್ಧಾರವಾಗಲಿದೆ. ಆದ್ರೇ ಅದಕ್ಕಿಂತ ಮೊದಲೇ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಅಂತ ರಾಜಗುರು ದ್ವಾರಕನಾಥ್ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಈ ಕುರಿತಂತೆ ಚಿಕ್ಕಮಗಳೂರಿನಲ್ಲಿ ದತ್ತಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರು ಈ ದೇಶದ ಪ್ರಧಾನಿ ಮತ್ತೆ ಆಗಲಿದ್ದಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ.
ಇನ್ನೂ ಸದ್ಯಕ್ಕೆ ಸಿಎಂ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಧಕ್ಕೆಯಿಲ್ಲ. ಅವರು ಮುಖ್ಯಮಂತ್ರಿಯಾಗೇ ಮುಂದುವರೆಯಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ. ಆದರೆ, ಗುಣದಲ್ಲಿ ಬದಲಾವಣೆ ಮಾಡಿಕೊಂಡರೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಮುಂದೊಂದು ದಿನ ಸಿಎಂ ಆಗಲಿದ್ದಾರೆ. ಅವರು ರಾಜ್ಯವನ್ನ ಆಳುವ ದಿನ ಬರಲಿದೆ. ಅಕ್ಕಿ ಹಾಕಿದ ತಕ್ಷಣ ಅನ್ನ ಆಗಲ್ಲ, ಇದು ಹಾಗೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.