ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊರನಾಡು-ಕೊಟ್ಟಿಗೆಹಾರ ಮಧ್ಯದ ಬಾಳೂರು ಎಸ್ಟೇಟ್ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದಿದೆ. ಇದರಿಂದ ಸುಮಾರು ಒಂದು ಗಂಟೆಗಳ ಕಾಲ ಹೊರನಾಡು ರಸ್ತೆ ಸಂಪರ್ಕ ಮೊಟಕುಗೊಂಡಿತ್ತು. ಬಳಿಕ ಮಳೆಯ ಮಧ್ಯೆಯೂ ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ವಿಪತ್ತು ನಿರ್ವಹಣ ತಂಡವು ಸ್ಥಳೀಯರ ನೆರವಿನಿಂದ ಮರವನ್ನು ತೆರವುಗೊಳಿಸಿದರು.
ಮೂಡಿಗೆರೆ: ಬಳೂರು ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.