ಮೂಡಿಗೆರೆ: ಮೂಡಿಗೆರೆ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ದಿಸಲು ಬಾರಿ ಪೈಪೋಟಿ ಇದ್ದು. ಹೊರಗಿನಿಂದ ಬಂದವರಿಗೆ ಮಣೆಹಾಕದೇ ಸ್ಥಳೀಯರಿಗೆ ಟಿಕೇಟು ನೀಡುವಂತೆ ಪಕ್ಷದ ಕಾರ್ಯ ಕರ್ತರ ಒತ್ತಾಯವಿದ್ದ ಹಿನ್ನಲೆಯಲ್ಲಿ ೨೦೨೩ ರ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಯನ ಮೋಟಮ್ಮ ಅವರಿಗೆ ಟಿಕೇಟು ದೊರೆತಿದ್ದು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕಾಂಗ್ರೆಸ್ ಮುಖಂಡ ಜಿ.ಹೆಚ್.ಹಾಲಪ್ಪಗೌಡ ತಿಳಿಸಿದರು.
ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಆಕಾಂಕ್ಷಿಗಳಿದ್ದು. ಅಭ್ಯರ್ಥಿ ನಯನ ಮೋಟಮ್ಮ ಅವರ ಹೆಸರು ಪ್ರಕಟವಾಗುತ್ತಿದ್ದಂತೆ ಕೆಲವರಲ್ಲಿ ಅಸಮಾಧಾನ ಉಂಟಾಗಿದ್ದು ಸಂಘಟನೆಯಿಂದ ದೂರ ಉಳಿದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಆಲ್ದೂರು ಹೋಬಳಿಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಲಿ ಜಿಲ್ಲಾ ಉಪಾಧ್ಯಕ್ಷ ಹಳ್ಳಿ ಕೃಷ್ಣೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಅರೆನೂರು ಪ್ರಕಾಶ್ ನೇತೃತ್ವದಲ್ಲಿ ಅಂಬಳೇ ಹೋಬಳಿಯ ರಾಕೇಶ್, ಹಾಗೂ ವಸ್ತಾರೆ ಹೋಬಳಿಯ ಯೋಗೇಶ್ ಸೇರಿದಂತೆ ನೂರಾರು ಕಾರ್ಯಕರ್ತರ ಮನ ವೋಲೈಸಿ ಪಕ್ಷದ ಗೆಲುವಿಗೆ ಕಾರ್ಯ ನಿರ್ವಹಿಸುತ್ತಿದ್ದು ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವೆ ಮೋಟಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ, ಎಂ.ಎಸ್.ಅನಂತು, ಜಿಲ್ಲಾ ಉಪಾಧ್ಯಕ್ಷ ಹಳ್ಳಿ ಕೃಷ್ಣೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಅರೆನೂರು ಪ್ರಕಾಶ್, ಸಂಪತ್ ,ಕಿಸನ್ ಸೆಲ್ ಜಿಲ್ಲಾಧ್ಯಕ್ಷ ಚಂದ್ರು ಒಡೆಯರ್, ಸಿ.ಬಿ.ಶಂಕರ್ ಸೇರಿದಂತೆ ಎಸ್.ಸಿ. ಎಸ್.ಟಿ ಅಧ್ಯಕ್ಷರು, ಉಪಾಧ್ಯಕ್ಷರು, ಹಿಂದುಳಿದ ವರ್ಗಗಳ ಅಧ್ಯಕ್ಷರು ಉಪಾಧ್ಯಕ್ಷರು ಉಪಸ್ಥಿತರಿದ್ದರು.