News Karnataka Kannada
Sunday, April 28 2024
ಚಿಕಮಗಳೂರು

ಮೂಡಿಗೆರೆ: ಸಿ.ಪಿ.ಐ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಶ್ರಮ – ರಮೇಶ್ ಉಲ್ಲಾಳ

Efforts are being made to ensure victory of CPI candidate: Ramesh Ullal
Photo Credit : News Kannada

ಮೂಡಿಗೆರೆ: ನಮ್ಮನ್ನಾಳಿದ ಮೂರು ಪಕ್ಷಗಳು ಆದಿ ದ್ರಾವಿಡ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿಲ್ಲ. ಹಾಗಾಗಿ ನಮ್ಮ ಸಮಾಜದ ವ್ಯಕ್ತಿಗಳೆ ಜನಪ್ರತಿನಿಧಿಗಳಾಗಬೇಕು. ಈ ನಿಟ್ಟಿನಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಸಿಪಿಐ ಪಕ್ಷ ಅಭ್ಯರ್ಥಿ ರಮೇಶ್ ಕೆಳಗೂರು ಅವರು ನಮ್ಮ ಆದಿ ದ್ರಾವಿಡ ಸಮಾಜದವರಾಗಿದ್ದು, ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಆದಿ ದ್ರಾವಿಡ ಸಮಾಜದ ರಾಜ್ಯ ಕಾರ್ಯದರ್ಶಿ ರಮೇಶ್ ಉಲ್ಲಾಳ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆದಿ ದ್ರಾವಿಡ ಸಮಾಜದವರು ಹೆಚ್ಚಾಗಿ ಕೂಲಿ ಕಾರ್ಮಿಕರಾಗಿದ್ದು, ವಾಸಿಸಲು ಮನೆ, ದುಡಿಯಲು ಭೂಮಿ, ಕುಟುಂಬ ನಿರ್ವಹಣೆಗೆ ಕೆಲಸ ನೀಡುವಂತಹ ಮನಸ್ಥಿತಿ ಇಲ್ಲಿವರೆಗೂ ಆಡಳಿತ ನಡೆಸಿದ ಯಾವ ಪಕ್ಷಕ್ಕೂ ಇಲ್ಲ. ಅಲ್ಲದೇ ಸರಕಾರಿ ಸೌಲಭ್ಯಗಳಿಂದ ಕೂಡ ವಂಚಿತರಾಗುತ್ತಿದ್ದಾರೆ. ನಮ್ಮ ಸಮಾಜದ ಜನರು ಗ್ರಾ.ಪಂ, ತಾ.ಪಂ, ಜಿ.ಪಂ, ಎಂಎಲ್‌ಎಯಂತಹ ಸ್ಥಾನ ಪಡೆದರೆ ಮಾತ್ರ ಸಮಾಜದ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಹಾಗಾಗಿ ರಾಜ್ಯದಲ್ಲಿ ಸುಳ್ಯಾ, ಮಡಿಕೇರಿ ಹಾಗೂ ಮೂಡಿಗೆರೆ ವಿಧಾನಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಅಭ್ಯರ್ಥಿ ಸ್ಪರ್ಧಿಸಿದ್ದು, ಅವರಿಗೆ ಸಂಪೂರ್ಣ ಬೆಂಬಲ ಸಮುದಾಯದ ಜನರು ನೀಡಬೇಕೆಂದು ಮನವಿ ಮಾಡಿದರು.

ರಾಜ್ಯ ಉಪಾಧ್ಯಕ್ಷ ಸುರೇಶ್ ಬಲ್ಲಳಬಾಗ್ ಮಾತನಾಡಿ, ಮೂಡಿಗೆರೆ ಕ್ಷೇತ್ರದಲ್ಲಿ ಆದಿ ಡ್ರಾವಿಡ ಸಮಾಜ ಎಲ್ಲಾ ಹೋಬಳಿಯಲ್ಲಿಯೂ ಇದೆ. ಅದರ ಮುಖಾಂತರ ನಮ್ಮ ಸಮಾಜದ ಅಭ್ಯರ್ಥಿ ರಮೇಶ್ ಕೆಳಗೂರು ಅವರನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸಲಾ ಗುವುದು ಎಂದು ಹೇಳಿದರು. ಆದಿ ಡ್ರಾವಿಡ ಸಮಾಜದ ರಾಜ್ಯ ಉಪಾಧ್ಯಕ್ಷ ಎ.ಎಸ್.ಮಾಣಪ್ಪ ಅಡ್ತಾಳ್, ಕಳಸ ತಾಲೂಕು ಅಧ್ಯಕ್ಷ ಮೋಹನ್ ಹಿರೇಬೈಲ್, ಮುಖಂಡರಾದ ಸಂತೋಷ್ ಡಿ.ಸಾಲಿಯಾನ್, ರಾಜು ಗಬ್ಗಲ್, ಅಶೋಕ್ ಗಬ್ಗಲ್ ಮತ್ತಿತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು