ಮೂಡಿಗೆರೆ: ತಾಲೂಕಿನಲ್ಲಿ ಮಿತಿ ಮೀರಿದ ಭ್ರಷ್ಟಾಚಾರ, ಹೊಸ ಕಾಮಗಾರಿಗಳು ಕೆಲವೇ ತಿಂಗಳಲ್ಲಿ ಹಾಳಾಗುತ್ತಿದೆ. ಇದೀಗ ಹೊಸ ಸರಕಾರ ಬಂದಿದೆ. ಸ್ಥಳೀಯ ಶಾಸಕಿ ನಯನಾ ಮೋಟಮ್ಮ ಅವರು ಆಡಳಿತ ಪಕ್ಷದವರೇ ಆಗಿದ್ದಾರೆ. ಅವರು ಸಂಘ ಸಂಸ್ಥೆಗಳು, ಗ್ರಾಮಸಭೆಗಳ ಅಭಿಪ್ರಾಯ ಸಂಗ್ರಹಿಸಿ ತಾಲೂಕಿನ ಜ್ವಲಂತ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಬೇಕೆಂದು ರೈತ ಮುಖಂಡ ಡಿ.ಎಸ್.ರಮೇಶ್ಗೌಡ ಒತ್ತಾಯಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಕದ ಹೊರ ಜಿಲ್ಲೆಯಾದ ಹಾಸನ ಮತ್ತು ಶಿವಮೊಗ್ಗ ಭಾಗದ ಹಳ್ಳಿಗಳಲ್ಲಿ ನಿರಂತರ ವಿದ್ಯುತ್ ಪೂರೈಕೆಯಾಗುತ್ತಿದ್ದು, ಮೂಡಿಗೆರೆ ತಾಲೂಕಿನಲ್ಲಿ ಮಾತ್ರ ಹಿಂದಿನಿಂದಲೂ ವಿದ್ಯುತ್ ಸಮಸ್ಯೆ ಎದುರಿಸುವಂತಾಗಿದೆ.
ಚಿಕ್ಕಮಗಳೂರಿನಿಂದ ನೇರವಾಗಿ ಒನ್ ಲೈನ್ ಮೂಲಕ ವಿದ್ಯುತ್ ಪೂರೈಕೆ ಮಾಡಬೇಕು. ಕಾಡಾನೆಗೆ ಶಾಶ್ವತ ಪರಿಹಾರಕ್ಕೆ ತಾಲೂಕಿನಲ್ಲಿ ಆನೆ ಬಿಡಾರ ಸ್ಥಾಪಿಸಬೇಕು. ಆಡಳಿತ ವ್ಯವಸ್ಥೆ ಸಂಪೂರ್ಣ ಬದಲಾಯಿಸಿ ತಾಲೂಕಿನ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಬೇಕೆಂದು ಒತ್ತಾಯಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಕಳೆದ ವರ್ಷ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚಿಕ್ಕಮಗಳೂರಿನಿಂದ ಮೂಡಿಗೆರೆ ವರೆಗೆ ರಸ್ತೆ ಅಗಲೀಕರಣ ಮಾಡಲಾಗುವುದು ಎಂದು ಹೇಳಿದ್ದು, ಇದೂವರೆಗೆ ರಸ್ತೆ ಅಗಲೀಕರಣವಾಗಿಲ್ಲ.
ಅವರು ಕ್ಷೇತ್ರಕ್ಕೆ ಬಂದಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತ್ರ ತಿರುಗಾಡಿ ತೆರಳುತ್ತಾರೆ ಹೊರತು, ಜನ ಸಾಮಾನ್ಯರ ಬೇಟಿ ಮಾಡಿ ಸಮಸ್ಯೆ ಆಲಿಸುವುದಿಲ್ಲ. ಹಿಂದಿನ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ರೈತರಿಗೆ ೦ ಪರ್ಸೆಂಟೇಜ್ನಲ್ಲಿ ೫ ಲಕ್ಷ ಸಾಲ ನೀಡುತ್ತೇವೆಂದು ಹೇಳಿದ್ದರು. ಈಗಿನ ಸರಕಾರ ೧೦ ಲಕ್ಷ ಸಾಲ ನೀಡುತ್ತವೆಂದು ಹೇಳಿದೆ. ಆ ಸಾಲ ಮುಂಗಾರು ಪೂರ್ವದಲ್ಲಿಯೇ ಸಕಾಲದಲ್ಲಿ ನೀಡುವಂತೆ ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ರೈತ ಮುಖಂಡ ವಾಸುದೇವ ಸತ್ತಿಗನಹಳ್ಳಿ ಉಪಸ್ಥಿತರಿದ್ದರು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…
ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…
ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…
ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…
ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…