News Karnataka Kannada
Monday, April 29 2024
ಚಿಕಮಗಳೂರು

ʼನನ್ನ ಮತ ನನ್ನ ಹಕ್ಕುʼ ಮತದಾರರ ಜಾಗೃತಿ ಜಾಥ

ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ನಗರಸಭೆ ಪೌರಾಯುಕ್ತಾರಾದ ಕೃಷ್ಟಮೂರ್ತಿ ಮತದಾರರಲ್ಲಿ ಮನವಿ ಮಾಡಿದರು.
Photo Credit : NewsKarnataka

ಚಿಕ್ಕಮಗಳೂರು: ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ನಗರಸಭೆ ಪೌರಾಯುಕ್ತಾರಾದ ಕೃಷ್ಟಮೂರ್ತಿ ಮತದಾರರಲ್ಲಿ ಮನವಿ ಮಾಡಿದರು.

ಅವರು ಇಂದು ನಗರಸಭೆ ವತಿಯಿಂದ ನಗರದಲ್ಲಿ ಏರ್ಪಡಿಸಲಾಗಿದ್ದ ನನ್ನ ಮತ ನನ್ನ ಹಕ್ಕು ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾರರು ವಿವಿಧ ಪಕ್ಷಗಳು ನೀಡುವ ಆಸೆ ಆಮಿಷಗಳಿಗೆ ಒಳಗಾಗದೆ, ನಿರ್ಭೀತಿಯಿಂದಕಡ್ಡಾಯವಾಗಿ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ವಿನಂತಿಸಿದರು.

ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು ಬೇಧಭಾವ ಇಲ್ಲದೆ ಮತ ಚಲಾವಣೆ ಮಾಡಬೇಕು ಆ ಮೂಲಕ ಸಂವಿಧಾನ ಕಾಪಾಡಬೇಕೆಂದು ಹೇಳಿದರು.

ನಗರಸಭೆ ಕಾರ್ಮಿಕರು, ಸಿಬ್ಬಂದಿ ಅಧಿಕಾರಿಗಳನ್ನೂಳಗೊಂಡ ಮತದಾರರ ಜಾಗೃತಿ ಜಾಥ ಏರ್ಪಡಿಸಿ ಮತದಾರರಲ್ಲಿ ಮತದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ಜಾಥದ ಪ್ರಮುಖ ಉದ್ದೇಶ ಎಂದರು.

ಈ ಸಂದರ್ಭದಲ್ಲಿ ಕಚೇರಿ ವ್ಯವಸ್ಥಾಪಕ ರವಿ, ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ತೇಜಸ್ವಿನಿ, ಕಂದಾಯಾಧಿಕಾರಿ ರಮೇಶ್ ನಾಯ್ಡು, ಆರೋಗ್ಯ ಶಾಖೆಯ ಎಲ್ಲಾ ಮುಖಂಡರು, ಮೇಲ್ವಿಚಾರಕರು, ಪೌರಕಾರ್ಮಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು