News Karnataka Kannada
Monday, May 06 2024
ಚಿಕಮಗಳೂರು

ನರಸಿಂಹರಾಜಪುರ: ನಿವೇಶನ ಹಕ್ಕುಪತ್ರ ಹಂಚಿಕೆಯಲ್ಲಿ ವಿಳಂಬ – ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Delay in allotment of land title deeds warns of boycott of elections
Photo Credit : News Kannada

ನರಸಿಂಹರಾಜಪುರ: ತಾಲ್ಲೂಕಿನ ಬನ್ನೂರು ಗ್ರಾಮದಲ್ಲಿ ನಿವೇಶನ ರಹಿತರಿಗೆ ಸರ್ಕಾರ ಹಕ್ಕುಪತ್ರ ವಿತರಿಸುವಲ್ಲಿ ವಿಳಂಭ ಧೋರಣೆ ತಾಳಿರುವ ಹಿನ್ನೆಲೆಯಲ್ಲಿ ಹಕ್ಕುಪತ್ರ, ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಏಳೂರು ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿ ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎಸ್.ಶ್ರೀಕಾಂತ್ ಕುಂಬ್ರುಮನೆ, ಸೊಪ್ಪಿನಕಾಡು, ಶೆಟ್ಟಿಹಿತ್ಲು, ಕೂಡಿಗೆ, ಜಕ್ಕಣಕ್ಕಿ, ಹಲಸೂರು, ಬನ್ನೂರು ಗ್ರಾಮದಲ್ಲಿ ಸುಮಾರು ೪ ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಯನ್ನು ಹೊಂದಿದೆ. ಪ.ಜಾತಿ ಮತ್ತು ಪ.ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ನೂರಾರು ವರ್ಷಗಳಿಂದ ನಿರ್ಗತಿಕರಾಗಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ ಎಂದರು.

ಪ್ರತಿವರ್ಷ ಸರ್ಕಾರ ಸೂಚಿಸಿದ ಕಂದಾಯ ಇಲಾಖೆಯ ೯೪ಸಿ, ೫೩, ೫೭ ಮತ್ತು ಹಕ್ಕು ಪತ್ರ ಪಡೆಯಲು ಅರಣ್ಯ ಹಕ್ಕು ಸಮಿತಿಗೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಇಲ್ಲಿಯವರೆಗೂ ಯಾರಿಗೂ ಹಕ್ಕುಪತ್ರ ನೀಡಿರುವುದಿಲ್ಲ. ಬನ್ನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ೩೧೫ ಎಕರೆ ಗೋಮಾಳ ಜಾಗವಿದ್ದರೂ ಅನೇಕ ವರ್ಷಗಳಿಂದ ವಾಸವಾಗಿರುವ ನಿವೇಶನ ರಹಿತರಿಗೆ ಹಕ್ಕು ಪತ್ರ ನೀಡಿರುವುಲ್ಲ ಎಂದು ಆರೋಪಿಸಿದರು.

ಬನ್ನೂರು ವ್ಯಾಪ್ತಿಯ ಶೆಟ್ಟಿಹಿತ್ಲು, ಕುಂಬ್ರುಮನೆ, ಸೊಪ್ಪಿನಕಾಡು, ಜಕ್ಕಣಕ್ಕಿ, ಕೂಡಿಗೆ ಹಾಗೂ ಹಲಸೂರು ಗ್ರಾಮಸ್ಥರು ನಿವೇಶನ ಹಕ್ಕುಪತ್ರ ನೀಡಿದ ನಂತರವೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ ಹಾಕುತ್ತೇವೆ. ಇಲ್ಲವಾದಲ್ಲಿ ಏಳೂರು ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸುವ ಜೊತೆಗೆ ಗ್ರಾಮದಲ್ಲಿ ರಾಜ ಕೀಯ ಪ್ರಚಾರ ಕಾರ್ಯ ಕೈಗೊಳ್ಳದಂತೆ ತಡೆಯೊಡ್ಡಲಾ ಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಉಪಾಧ್ಯಕ್ಷ ಹರೀಶ್, ಕಾರ್ಯದರ್ಶಿ ಆಯಿಷಾ, ಗ್ರಾಮಸ್ಥರಾದ ಟಿ.ಕೃಷ್ಣಪ್ಪ, ಶಂಕರ, ಅಣ್ಣಪ್ಪ, ಉಮೇಶ್, ರತ್ನ, ಬಿ.ಟಿ.ರಮೇಶ್, ಉಮೇಶ್, ಸತೀಶ್, ರವಿ ಮತ್ತಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು