ಚಿಕಮಗಳೂರು

ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಕಾಫೀನಾಡಿನ ಜನತೆ: ಸ್ವೀಪ್ ಕಾರ್ಯಕ್ರಮಕ್ಕೆ ಸ್ಪಂದನೆ

ಚಿಕ್ಕಮಗಳೂರು: ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಚುನಾವಣಾ ಆಯೋಗ ಹಾಗೂ ಸ್ವೀಪ್ ಸಮಿತಿಗಳು ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಿಗೆ ಉತ್ತಮ ಸ್ಪಂದನೆ ಸಿಕ್ಕಂತಾಗಿದೆ.

ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಮತದಾನ ಉತ್ತಮ ಪ್ರಮಾಣದಲ್ಲಿ ಆಗಿದೆ. ಇದರ ಲಾಭ ಯಾವ ಪಕ್ಷಕ್ಕಾಗಲಿದೆ ಎನ್ನುವ ಲೆಕ್ಕಾಚಾರ ಆರಂಭವಾಗಿದೆ. ಅಲ್ಲದೆ ಕೊನೆ ಘಳಿಗೆವರೆಗೆ ನಡೆದ ಸಮೀಕ್ಷೆಗಳ ಲೆಕ್ಕಾಚಾರವೆಲ್ಲವೂ ತಲೆಕೆಳಕಾದರೂ ಆಶ್ಚರ್ಯ ಪ್ರಡುವಂತಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಮೊದಲ ಬಾರಿ ಮತ ಚಲಾಯಿಸಿದವರು, ಯುವಕ, ಯುವತಿಯರು ವಯೋವೃದ್ಧರಷ್ಟೇ ಅಲ್ಲದೆ, ಶತಾಯುಷಿಗಳು ಸಹ ಈ ಬಾರಿ ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿರುವುದು ವಿಶೇಷವಾಗಿದೆ. ಚುನಾವಣೆ ವಾರಾಂತ್ಯದ ದಿನದಲ್ಲಿ ಬಾರದಿರುವುದು ಸಹ ಮತದಾನ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿದೆ.

ಈ ಬಾರಿಯ ಕ್ಷೇತ್ರವಾರು ಮತದಾನದ ವಿವರ
ಶೃಂಗೇರಿ ಒಟ್ಟು ಮತದಾರರ ಸಂಖ್ಯೆ ೧೭೦೫೧೪, ಈ ಪೈಕಿ ೬೯೩೫೦ ಪುರುಷರು, ೭೦೬೮೪ ಮಹಿಳೆಯರು ಸೇರಿ ೧೪೦೦೩೫ ಮಂದಿ ಹಕ್ಕು ಚಲಾಯಿಸಿದ್ದಾರೆ.
ಮೂಡಿಗೆರೆ ಒಟ್ಟು ಮತದಾರರ ಸಂಖ್ಯೆ ೧೭೧೯೯೮, ಈ ಪೈಕಿ ೬೬೩೭೯ ಪುರುಷರು, ೬೬೬೯೧ ಮಹಿಳೆಯರು ಸೇರಿ ೧೩೩೦೭೨ ಮಂದಿ ಮತ ಚಲಾಯಿಸಿದ್ದಾರೆ.
ಚಿಕ್ಕಮಗಳೂರು ಒಟ್ಟು ಮತದಾರರ ಸಂಖ್ಯೆ ೨೩೦೫೯೪, ಈ ಪೈಕಿ ೮೩೯೯೪ ಪುರುಷರು, ೮೪೩೬೮ ಮಹಿಳೆಯರು ಸೇರಿ ೧೬೮೩೧೭ ಮಂದಿ ಹಕ್ಕು ಚಲಾಯಿಸಿದ್ದಾರೆ.
ತರೀಕೆರೆ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ ೧೯೩೬೪೫, ಈ ಪೈಕಿ ೭೭೭೪೬ ಪುರುಷರು, ೭೫೯೧೯ ಮಹಿಳೆಯರು ಸೇರಿ ೧೫೩೬೬೬ ಮಂದಿ ಮತ ಹಾಕಿದ್ದಾರೆ.
ಕಡೂರು ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ ೨೦೬೪೮೭, ಈ ಪೈಕಿ ೮೪೬೭೭ ಪುರುಷರು, ೮೨೨೯೩ ಮಹಿಳೆಯರು ಸೇರಿ ೧೬೬೯೭೩ ಮಂದಿ ಹಕ್ಕು ಚಲಾಯಿಸಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದಲ್ಲಿಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ೨೦೧೮ ಕ್ಕೆ ಹೋಲಿಸಿದರೆ ಶೇ. ೦.೧೫ ರಷ್ಟು ಮತದಾನ ಪ್ರಮಾಣ ಹೆಚ್ಚಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಲಾಭ, ನಷ್ಟದ ಲೆಕ್ಕಾಚಾರಗಳು ಆರಂಭವಾಗಿದೆ.

ಕಡೂರು ಮತ್ತು ಶೃಂಗೇರಿ ಕ್ಷೇತ್ರಗಳಲ್ಲಿ ಮತ ಪ್ರಮಾಣ ಶೇ.೮೦ ನ್ನು ದಾಟಿದ್ದರೆ ಕಳೆ ಬಾರಿಗೆ ಹೋಲಿಸಿದಲ್ಲಿ ಚಿಕ್ಕಮಗಳೂರು ಹಾಗೂ ತರೀಕೆರೆ ಕ್ಷೇತ್ರಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮತದಾನ ಕಡಿಮೆಯಾಗಿದೆ.

ಶೃಂಗೇರಿ ಕ್ಷೇತ್ರದಲ್ಲಿ ೨೦೧೮ ರಲ್ಲಿ ಶೇ.೮೨.೦೩ ರಷ್ಟು ಮತದಾನ ಆಗಿದ್ದರೆ, ಈ ಬಾರಿ ೮೨.೧೩ ಮತದಾನ ಆಗಿದೆ. ಮೂಡಿಗೆರೆ ಕ್ಷೇತ್ರ ೨೦೧೮ ರಲ್ಲಿ ಶೇ.೭೬.೯೪ ಆದರೆ, ಈ ಬಾರಿ ಶೇ. ೭೭.೩೭ ರಷ್ಟು ಮಂದಿ ಹಕ್ಕು ಚಲಾಯಿಸಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ೨೦೧೮ ರಲ್ಲಿ ೭೩.೭೨ ರಷ್ಟು ಮತದಾನ ನಡೆದಿತ್ತು. ಈ ಬಾರಿ ಶೇ. ೭೨.೯೯ ರಷ್ಟು ಮತದಾನ ಆಗಿದೆ. ತರೀಕೆರೆ ಕ್ಷೇತ್ರದಲ್ಲಿ ೨೦೧೮ ರಲ್ಲಿ ಶೇ. ೮೧.೦೨ ಮತದಾನವಾಗಿದ್ದರೆ, ಈ ಬಾರಿ ಶೇ.೭೯.೩೫ ರಷ್ಟು ಮತದಾನ ನಡೆದಿದೆ. ಕಡೂರು ಕ್ಷೇತ್ರದಲ್ಲಿ ೨೦೧೮ ರಲ್ಲಿ ೭೮.೧೪ ರಷ್ಟು ಮತದಾನವಾಗಿದ್ದು, ಈ ಬಾರಿ ಶೇ. ೮೦.೮೬ ರಷ್ಟು ಮತದಾನ ನಡೆದಿದೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago