ಚಿಕ್ಕಮಗಳೂರು: ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಸಂಬಂಧ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ಮುಂದುವರೆದಿದೆ.
ಮುಂಜಾನೆ 5 ಗಂಟೆಯ ತನಕ ಪೊಲೀಸರು ಪ್ರತಿಭಟನೆ ನಡೆಸಿದ್ದು, ಪೊಲೀಸ್ ಸಿಬ್ಬಂದಿ ಬಂಧಿಸದಂತೆ ಒತ್ತಾಯಿಸಿದರು. ವಕೀಲರ ಮೇಲೆ ಹಲ್ಲೆ ಪ್ರಕರಣ ಸಂಬಂಧ 6 ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಪೊಲೀಸರ ಪ್ರತಿಭಟನೆ ಹಿನ್ನಲೆಯಲ್ಲಿ ಐಜಿಪಿ ಚಂದ್ರಗುಪ್ತ ಸ್ಥಳಕ್ಕೆ ಭೇಟಿ ನೀಡಿದರು. ಆದರೆ ಐಜಿಪಿ ಭರವಸೆಗೂ ಜಗ್ಗದ ಪೊಲೀಸರು, ಬೆಳಗಿನ ಜಾವ 5 ಗಂಟೆವರೆಗೂ ಪ್ರತಿಭಟನೆ ನಡೆಯಿತು. ಒತ್ತಾಯಕ್ಕೆ ಮಣಿದ ಪೊಲೀಸರು ಮೂರು ಎಫ್ಐಆರ್ ಗಳನ್ನೂ ಕೈಬಿಟ್ಟಿದ್ದಾರೆ.