ಚಿಕ್ಕಮಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ದಿನ ವಿದ್ಯಾರ್ಥಿಗಳು ರಜೆ ಮಾಡಿದರೆ 1,000 ರೂ. ದಂಡ ವಿಧಿಸುವುದಾಗಿ ಚಿಕ್ಕಮಗಳೂರಿನ ಶಾಲೆಯೊಂದರಲ್ಲಿ ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಜನವರಿ 22ರಂದು ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ರಾಜ್ಯ ಸರ್ಕಾರ ಕೂಡ ರಜೆ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಆದರೆ, ಈ ಕುರಿತು ರಾಜ್ಯ ಸರ್ಕಾರ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಆದರೆ ಸೋಮವಾರ ಶಾಲೆಗೆ ರಜೆ ಮಾಡಿದರೆ 1000 ರೂ. ದಂಡ ತೆರಬೇಕಾಗುತ್ತದೆ ಎಂದು ಚಿಕ್ಕಮಗಳೂರು ನಗರದ ಸೇಂಟ್ ಜೋಸೆಫ್ ಶಾಲಾ ಮಂಡಳಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.
ಇದೀಗ ಸೇಂಟ್ ಜೋಸೆಫ್ ಶಾಲಾ ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಆಡಳಿತ ಮಂಡಳಿಯ ವಿರುದ್ಧ ಭಜರಂಗದಳ, ವಿಹೆಚ್ಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಎದುರು ಬೀಡುಬಿಟ್ಟಿದ್ದಾರೆ.