News Karnataka Kannada
Sunday, May 05 2024
ಚಿಕಮಗಳೂರು

ಒತ್ತುವರಿ ತೆರವು ಭೂಮಿಯನ್ನು ಭೂರಹಿತ ದಲಿತರಿಗೆ ಮಂಜೂರು ಮಾಡುವಂತೆ ಮನವಿ

ತಾಲ್ಲೂಕು ಆಡಳಿತ ಗೋಮಾಳ ಮತ್ತು ಕಾಫಿ ಖರಾಬು ಹೆಚ್ಚುವರಿ ಜಮೀನನ್ನು ಬಹು ಜಮೀನು ಒತ್ತುವರಿದಾರರಿಂದ ತೆರವುಗೊಳಿಸಿದ್ದು, ಈ ಜಮೀನನ್ನು ಭೂರಹಿತದಲಿತರಿಗೆ ಕಾಯ್ದಿರಿಸಿ ಮಂಜೂರು ಮಾಡುವಂತೆಜಿಲ್ಲಾಧಿಕಾರಿ ಮೀನಾ ನಾಗರಾಜ್‌ರವರಿಗೆ ಕರ್ನಾಟಕದಲಿತ ಸಂಘರ್ಷ ಸಮಿತಿವತಿಯಿಂದ ಮನವಿ ನೀಡಿದರು.
Photo Credit : NewsKarnataka

ಚಿಕ್ಕಮಗಳೂರು: ತಾಲ್ಲೂಕು ಆಡಳಿತ ಗೋಮಾಳ ಮತ್ತು ಕಾಫಿ ಖರಾಬು ಹೆಚ್ಚುವರಿ ಜಮೀನನ್ನು ಬಹು ಜಮೀನು ಒತ್ತುವರಿದಾರರಿಂದ ತೆರವುಗೊಳಿಸಿದ್ದು, ಈ ಜಮೀನನ್ನು ಭೂರಹಿತದಲಿತರಿಗೆ ಕಾಯ್ದಿರಿಸಿ ಮಂಜೂರು ಮಾಡುವಂತೆಜಿಲ್ಲಾಧಿಕಾರಿ ಮೀನಾ ನಾಗರಾಜ್‌ರವರಿಗೆ ಕರ್ನಾಟಕದಲಿತ ಸಂಘರ್ಷ ಸಮಿತಿವತಿಯಿಂದ ಮನವಿ ನೀಡಿದರು.

ಕರ್ನಾಟಕದಲಿತ ಸಂಘರ್ಷ ಸಮಿತಿಯರಾಜ್ಯ ಸಂಘಟನಾ ಸಂಚಾಲಕರಾದತರೀಕೆರೆಎನ್.ವೆಂಕಟೇಶ್ ಮನವಿ ನೀಡಿ ಮಾತನಾಡಿ, ಎನ್.ಆರ್ ಪುರತಾಲ್ಲೂಕಿನ ಕಸಬಾ ಹೋಬಳಿ ಸೂಸಲವಾನಿ ಗ್ರಾಮದ ಸರ್ವೇ ನಂ ೩೨/೨ ರಲ್ಲಿ ಗೋಮಾಳ ಮತ್ತು ಕಾಫಿ ಖರಾಬು ಹೆಚ್ಚುವರಿ ಜಮೀನನ್ನು ಬಹು ಜಮೀನು ಒತ್ತುವರಿದಾರರಿಂದ ತೆರವುಗೊಳಿಸಿದ್ದು, ಈ ಜಮೀನುನ ಭೂರಹಿತ ದಲಿತರಿಗೆ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದರು.

ಇದೇ ಸರ್ವೆ ನಂಬರ್‌ನಲ್ಲಿ ೨೦-೦.೮ ಎಕರೆ ಸರ್ಕಾರಿ ಜಮೀನನ್ನು ಭೂಮಾಲೀಕರು ಅತಿಕ್ರಮವಾಗಿ ಸರ್ಕಾರಿ ಕಂದಾಯ ಭೂಮಿಯನ್ನು ಹೊಂದಿರುವ ಬಗ್ಗೆ ಪರಿಶೀಲಿಸಿದ ತಾಲೂಕು ಆಡಳಿತ ತೆರವುಗೊಳಿಸಿದ್ದು, ಇದೇ ಭೂಮಿಯನ್ನು ಬಡ ಭೂರಹಿತ ದಲಿತರಿಗೆ ಕೃಷಿ ಸಾಗುವಳಿಗಾಗಿ ಮತ್ತು ನಿವೇಶನಕ್ಕಾಗಿ ಕಾಯ್ದಿರಿಸಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಎನ್.ಆರ್ ಪುರ ತಾಲೂಕಿನಾದ್ಯಂತ ಇಂತಹ ಭೂ ಕಬಳಿಕೆಯ ಸಮಸ್ಯೆಗಳಿದ್ದು, ಉಳ್ಳವರು ಭೂಕಬಳಿಕೆ ಮಾಡುತ್ತಿದ್ದಾರೆ.ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಾದ ತಾವು ತಾಲೂಕು ದಂಡಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿತ್ವರಿತವಾಗಿ ಸ್ಥಳ ಪರಿಶೀಲಿಸಿ ಸರ್ವೆ ಮಾಡಿಸಿ ದಲಿತರಿಗೆ ಭೂಮಂಜೂರಾತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ವಿಳಂಭವಾದರೆ ನಮ್ಮ ಸಂಘಟನೆಯಿಂದ ಭೂರಹಿತ ದಲಿತರಿಗೆ ಭೂಮಿ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿದಸಂಸರಾಜ್ಯ ಸಂಘಟನಾ ಸಂಚಾಲಕರಾದ ಎಂ.ವಿಭವಾನಿ, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ರಾಜೇಶ್, ಮೃತ್ಯುಂಜಯ, ಅಬ್ದುಲ್‌ರೆಹಮನ್, ತಾಲೂಕು ಸಂಘಟನಾ ಸಂಚಾಲಕ ಬಿ.ಆರ್ ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು