ಒತ್ತುವರಿ ತೆರವು ಭೂಮಿಯನ್ನು ಭೂರಹಿತ ದಲಿತರಿಗೆ ಮಂಜೂರು ಮಾಡುವಂತೆ ಮನವಿ

ಚಿಕ್ಕಮಗಳೂರು: ತಾಲ್ಲೂಕು ಆಡಳಿತ ಗೋಮಾಳ ಮತ್ತು ಕಾಫಿ ಖರಾಬು ಹೆಚ್ಚುವರಿ ಜಮೀನನ್ನು ಬಹು ಜಮೀನು ಒತ್ತುವರಿದಾರರಿಂದ ತೆರವುಗೊಳಿಸಿದ್ದು, ಈ ಜಮೀನನ್ನು ಭೂರಹಿತದಲಿತರಿಗೆ ಕಾಯ್ದಿರಿಸಿ ಮಂಜೂರು ಮಾಡುವಂತೆಜಿಲ್ಲಾಧಿಕಾರಿ ಮೀನಾ ನಾಗರಾಜ್‌ರವರಿಗೆ ಕರ್ನಾಟಕದಲಿತ ಸಂಘರ್ಷ ಸಮಿತಿವತಿಯಿಂದ ಮನವಿ ನೀಡಿದರು.

ಕರ್ನಾಟಕದಲಿತ ಸಂಘರ್ಷ ಸಮಿತಿಯರಾಜ್ಯ ಸಂಘಟನಾ ಸಂಚಾಲಕರಾದತರೀಕೆರೆಎನ್.ವೆಂಕಟೇಶ್ ಮನವಿ ನೀಡಿ ಮಾತನಾಡಿ, ಎನ್.ಆರ್ ಪುರತಾಲ್ಲೂಕಿನ ಕಸಬಾ ಹೋಬಳಿ ಸೂಸಲವಾನಿ ಗ್ರಾಮದ ಸರ್ವೇ ನಂ ೩೨/೨ ರಲ್ಲಿ ಗೋಮಾಳ ಮತ್ತು ಕಾಫಿ ಖರಾಬು ಹೆಚ್ಚುವರಿ ಜಮೀನನ್ನು ಬಹು ಜಮೀನು ಒತ್ತುವರಿದಾರರಿಂದ ತೆರವುಗೊಳಿಸಿದ್ದು, ಈ ಜಮೀನುನ ಭೂರಹಿತ ದಲಿತರಿಗೆ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದರು.

ಇದೇ ಸರ್ವೆ ನಂಬರ್‌ನಲ್ಲಿ ೨೦-೦.೮ ಎಕರೆ ಸರ್ಕಾರಿ ಜಮೀನನ್ನು ಭೂಮಾಲೀಕರು ಅತಿಕ್ರಮವಾಗಿ ಸರ್ಕಾರಿ ಕಂದಾಯ ಭೂಮಿಯನ್ನು ಹೊಂದಿರುವ ಬಗ್ಗೆ ಪರಿಶೀಲಿಸಿದ ತಾಲೂಕು ಆಡಳಿತ ತೆರವುಗೊಳಿಸಿದ್ದು, ಇದೇ ಭೂಮಿಯನ್ನು ಬಡ ಭೂರಹಿತ ದಲಿತರಿಗೆ ಕೃಷಿ ಸಾಗುವಳಿಗಾಗಿ ಮತ್ತು ನಿವೇಶನಕ್ಕಾಗಿ ಕಾಯ್ದಿರಿಸಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಎನ್.ಆರ್ ಪುರ ತಾಲೂಕಿನಾದ್ಯಂತ ಇಂತಹ ಭೂ ಕಬಳಿಕೆಯ ಸಮಸ್ಯೆಗಳಿದ್ದು, ಉಳ್ಳವರು ಭೂಕಬಳಿಕೆ ಮಾಡುತ್ತಿದ್ದಾರೆ.ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಾದ ತಾವು ತಾಲೂಕು ದಂಡಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿತ್ವರಿತವಾಗಿ ಸ್ಥಳ ಪರಿಶೀಲಿಸಿ ಸರ್ವೆ ಮಾಡಿಸಿ ದಲಿತರಿಗೆ ಭೂಮಂಜೂರಾತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ವಿಳಂಭವಾದರೆ ನಮ್ಮ ಸಂಘಟನೆಯಿಂದ ಭೂರಹಿತ ದಲಿತರಿಗೆ ಭೂಮಿ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿದಸಂಸರಾಜ್ಯ ಸಂಘಟನಾ ಸಂಚಾಲಕರಾದ ಎಂ.ವಿಭವಾನಿ, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ರಾಜೇಶ್, ಮೃತ್ಯುಂಜಯ, ಅಬ್ದುಲ್‌ರೆಹಮನ್, ತಾಲೂಕು ಸಂಘಟನಾ ಸಂಚಾಲಕ ಬಿ.ಆರ್ ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

11 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

27 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

49 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago