News Karnataka Kannada
Saturday, May 04 2024
ಚಿಕಮಗಳೂರು

ಲಕ್ಷಾಂತರ ಮೌಲ್ಯದ ಸಾಗುವಾನಿ ಮರ ಕಡಿತಲೆ: ಇಬ್ಬರು ಆರೋಪಿಗಳ ಬಂಧನ

Saguvani tree felling worth lakhs of rupees: Two arrested
Photo Credit : News Kannada

ಬಾಳೆಹೊನ್ನೂರು: ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯ ದೇವದಾನ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ ಬೆಲೆ ಬಾಳುವ ನಾಲ್ಕು ಸಾಗುವಾನಿ ಮರ ಕಡಿತಲೆ ಮಾಡಿ ನಾಟಾ ಸಂಗ್ರಹ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ದೇವದಾನ ಎಸ್ಟೇಟ್‌ನ ಸೂಪರ್ ವೈಸರ್ ಎ.ಎ.ಇಲಿಯಾಸ್ ಹಾಗೂ ರೈಟರ್ ಸಿ.ಜೆ.ರಿನೋ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ದೇವದಾನ ಮೀಸಲು ಅರಣ್ಯದ ಸರ್ವೆ ನಂಬರ್ ೩೪೩ರಲ್ಲಿ ನಾಲ್ಕು ಸಾಗುವಾನಿ ಮರಗಳನ್ನು ಕಡಿತಲೆ ಮಾಡಿ, ೩೧ ಸೈಜ್ ನಾಟಾವನ್ನು ತಯಾರಿಸಿ, ೧೪ ರೌಂಡ್ ಲಾಗ್‌ಗಳನ್ನು ಮಾಡಿದ್ದರು.

ಅರಣ್ಯ ಇಲಾಖೆ ಸಿಬ್ಬಂದಿ ಮೀಸಲು ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವುದು ಕಂಡುಬಂದಿದ್ದು, ಇದರ ಜಾಡು ಹಿಡಿದು ಹೋದಾಗ ಸ್ಥಳೀಯ ಎಸ್ಟೇಟ್‌ನಲ್ಲಿ ಸೂಪರ್‌ವೈಸರ್, ರೈಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇಲಿಯಾಸ್, ರಿನೋ ಅವರು ಮರವನ್ನು ಕಡಿತಲೆ ಮಾಡಿರುವ ಮಾಹಿತಿ ಲಭ್ಯವಾಗಿದೆ.

ಆರೋಪಿಗಳು ಕಡಿತಲೆ ಮಾಡಿರುವ ಮರದಲ್ಲಿ ತಯಾರಿಸಿದ್ದ ೩೧ ಸೈಜ್ ನಾಟಾವನ್ನು ತಮ್ಮ ಮನೆಯಲ್ಲಿ ಉಳಿದ ರೌಂಡ್ ಲಾಗ್‌ಗಳನ್ನು ಅರಣ್ಯ ಪ್ರದೇಶದಲ್ಲಿ ಸಂಗ್ರಹಿಸಿಟ್ಟಿದ್ದರು. ಆರೋಪಿಗಳಿಂದ ೨.೩೮೧ ಕ್ಯೂಬಿಕ್ ಮೀಟರ್ ಸಾಗುವಾನಿ ಮರದ ನಾಟಾ, ತುಂಡುಗಳನ್ನು ಹಾಗೂ ಮರ ಕೊಯ್ಯಲು ಬಳಸಿದ ಯಂತ್ರವನ್ನು ವಶಕ್ಕೆ ಪಡೆಯಲಾಗಿದ್ದು, ಕಡಿತಲೆ ಮಾಡಿರುವ ಸಾಗುವಾನಿ ಮರಗಳ ಮೌಲ್ಯ ರೂ. ೪ ಲಕ್ಷಕ್ಕೂ ಅಧಿಕವಾಗಿದೆ. ಆರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಆರ್‌ಎಫ್‌ಓ ಎಂ. ಸಂದೀಪ್ ತಿಳಿಸಿದ್ದಾರೆ.

ಎಸಿಎಫ್ ಚೇತನ್ ಮಂಗಲ್ ಗಸ್ತಿ ಮಾರ್ಗದರ್ಶನದಲ್ಲಿ ಸಂಗಮೇಶ್ವರಪೇಟೆ ಡಿಆರ್‌ಎಫ್‌ಓ ಮಂಜುನಾಥ್, ಸಿಬ್ಬಂದಿಗಳಾದ ಹನುಮಂತ ಲೋನಿ, ಕಾರ್ತಿಕ್, ಚಾಲಕ ಪ್ರಕಾಶ್ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು