ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್ ಗೆ ಬಾರೀ ಫೈಟ್ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಟಿಕೆಟ್ಗಾಗಿ ಶೋಭಾ ಕರಂದ್ಲಾಜೆ ವರ್ಸಸ್ ಸಿಟಿ ರವಿ ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ಎಂದು ಕಾದುನೋಡಬೇಕಿದೆ.
ಇತ್ತ ಕಾರ್ಯಕರ್ತರು ಮಾತ್ರ ಶೋಭಕ್ಕನಿಗೆ ಟಿಕೆಟ್ ಕೊಟ್ರೆ ಸೋಲು ಖಚಿತ, ಲಕ್ಷ ನೋಟಾ ವೋಟು ಉಚಿತ ಎಂಬ ಅಭಿಯಾನ ಮುಂದುವರಿಸಿದ್ದಾರೆ. ಇದರ ಮಧ್ಯೆಯೂ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತು ಪರೋಕ್ಷವಾಗಿ ಅವರೇ ಅಭ್ಯರ್ಥಿ ಎಂದು ಭವಿಷ್ಯ ನುಡಿದಿರೋದು ಬಿಜೆಪಿಯೊಳಗೆ ಮತ್ತೊಂದಿಷ್ಟು ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಮಾಜಿ ಸಚಿವ ಸಿಟಿ ರವಿ ಕೂಡ ಟಿಕೆಟ್ಗಾಗಿ ತೀವ್ರ ಕಸರತ್ತು ನಡೆಸ್ತಿದ್ದಾರೆ