News Karnataka Kannada
Monday, May 06 2024
ಚಿಕಮಗಳೂರು

ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ : ರಜ್ವಿ

ರಾಜ್ಯದಲ್ಲಿ ಮುಸ್ಲಿಂ ರಾಜಕೀಯ ನಾಯಕರ ಕೊರತೆಯಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಹಳಷ್ಟು ಹಿಂದುಳಿದಿದ್ದಾರೆ ಎಂದು ಸಾಮಾಜಿಕ ಚಿಂತಕ ಫೈರೋಜ್ ಅಹ್ಮದ್ ರಜ್ವಿ ಹೇಳಿದರು.
Photo Credit : NewsKarnataka

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ರಾಜಕೀಯ ನಾಯಕರ ಕೊರತೆಯಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಹಳಷ್ಟು ಹಿಂದುಳಿದಿದ್ದಾರೆ ಎಂದು ಸಾಮಾಜಿಕ ಚಿಂತಕ ಫೈರೋಜ್ ಅಹ್ಮದ್ ರಜ್ವಿ ಹೇಳಿದರು.

ಈ ಕುರಿತು ಹೇಳಿಕೆ ನೀಡಿರುವ ಅವರು ಮುಸ್ಲಿಂ ಪ್ರಾಮಾಣಿಕ ನಾಯಕರನ್ನು ಗುರುತಿಸಿ ಸಮುದಾಯದವರ ಹಿತದೃಷ್ಟಿಯನ್ನು ಕಾಪಾಡಲು ಹಾಗೂ ರಾಜಕೀಯ ಪ್ರವೃತ್ತಿಯನ್ನು ಬಲಗೊಳಿಸಲು ಪ್ರತಿಯೊಂದು ಸಂಘ-ಸಂಸ್ಥೆಗಳು ಮುಂದಾಗಬೇಕೆಂದು ತಿಳಿಸಿದ್ದಾರೆ.
ಕಳೆದ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನೇಕ ಮುಸ್ಲಿಂ ನಾಯಕರು ಸೇವೆ ಸಲ್ಲಿಸಿದ್ದು ರಾಜಕೀಯದಲ್ಲಿ ಮುತವರ್ಜಿಯನ್ನು ವಹಿಸಿದ್ದರ ಕಾರಣ ಅಂದು ವಿಧಾನಸಭೆಯಿಂದ ಸಂಸತ್ ಭವನದಲ್ಲೂ ಸಹ ಮುಸ್ಲಿಮರ ಪರ ಧ್ವನಿ ಗೋಚರಿಸುತ್ತಿತ್ತು ಎಂದಿದ್ದಾರೆ.

ಇದೀಗ ಬೆರಳೆಣಿಕೆಯ ಮುಸ್ಲಿಂ ನಾಯಕರಿದ್ದು ಸಮುದಾಯದಲ್ಲಿ ರಾಜಕೀಯ ನಾಯಕರ ಕೊರತೆ ಉಂಟಾಗಿರುತ್ತದೆ. ಇದಕ್ಕೆ ನಮ್ಮಲ್ಲಿನ ವೈಯುಕ್ತಿಕ ದ್ವೇಷಗಳೇ ಕಾರಣವಾಗಿದೆ. ಇಂದಿನ ರಾಜಕೀಯ ಬೆಳವಣಿಗೆಯಲ್ಲಿ ಗ್ರಾ.ಪಂ.ನಿಂದ ಲೋಕಸಭೆ, ಮತ್ತು ರಾಜ್ಯಸಭೆವರೆಗೂ ಮುಸ್ಲಿಮರ ರಾಜಕೀಯ ಪ್ರವೇಶ ಅತ್ಯವಶ್ಯಕ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಮುಸ್ಲಿಮರು ಜಾತ್ಯತೀತ ಸರ್ಕಾರ ರಚಿಸಲು ಹಗಲಿರುಳು ಶ್ರಮಿಸಿದ ಪ್ರತಿಫಲ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸಲು ಕಾರಣವಾಗಿದೆ. ಪಕ್ಷದ ನಿಷ್ಟಾವಂತ ಮುಸ್ಲಿಂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ಕಲ್ಪಿಸದೆ ಕಡೆಗಣಿಸಿ ಸಮುದಾಯದಲ್ಲಿ ಗೊಂದಲ ವಾತಾವರಣ ಸೃಷ್ಟಿಯಾಗಿದೆ ಎಂದಿದ್ದಾರೆ.

ಜಿಲ್ಲೆಯಲ್ಲಿ ಹಿರಿಯ ಕಾರ್ಯಕರ್ತರನ್ನು ಸರ್ಕಾರದ ನಿಗಮ ಮಂಡಳಿಗಳಲ್ಲಿ ಪ್ರಮುಖ ಸ್ಥಾನಮಾನ ಕಲ್ಪಿಸಿ ಪ್ರೋತ್ಸಾಹಿಸಲು ಪಕ್ಷದ ಉನ್ನತ ನಾಯಕರು ಮುಂದಾಗುವ ಅವಶ್ಯಕತೆ. ಪಕ್ಷದಲ್ಲಿನ ಆಂತರಿಕ ಕಲಹಗಳನ್ನು ಬದಿಗಿಟ್ಟು ಪಕ್ಷಕ್ಕೆ ದುಡಿಯುತ್ತಿರುವ ಮುಸ್ಲಿಂ ಕಾರ್ಯಕರ್ತರಿಗೆ ಮನವೊಲಿಸುವ ಕೆಲಸವನ್ನು ಕೈಗೊಂಡಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು